Select Your Language

Notifications

webdunia
webdunia
webdunia
webdunia

ರಾಜ್ಯ ಸರಕಾರದ ಅಡಳಿತ ತೃಪ್ತಿ ತಂದಿದೆ: ಸಚಿವ ಜಯಚಂದ್ರ

ರಾಜ್ಯ ಸರಕಾರದ ಅಡಳಿತ ತೃಪ್ತಿ ತಂದಿದೆ: ಸಚಿವ ಜಯಚಂದ್ರ
ಬೆಂಗಳೂರು , ಶನಿವಾರ, 14 ಮೇ 2016 (18:25 IST)
ರಾಜ್ಯ ಸರಕಾರ ಪಾರದರ್ಶಕವಾಗಿ ಮೂರು ವರ್ಷ ಉತ್ತಮ ಆಡಳಿತ ನೀಡಿದ ನಂತರವೂ ಟೇಕ್‌ಅಫ್ ಆಗಿಲ್ಲ ಎಂದು ರಾಜ್ಯ ಕಾನೂನು ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.

ಬನ್ನೇರುಘಟ್ಟ ರಸ್ತೆಯಲ್ಲಿರುವ ಎಮ್‌ಎಮ್‌ಸಿ ಇಂಜಿನಿಯರಿಂಗ್ ಕಾಲೇಜಿನ 14 ವರ್ಷದ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಚುನಾವಣೆ ಪೂರ್ವದಲ್ಲಿ ಸರಕಾರ 160 ಭರವಸೆಯನ್ನು ನೀಡಿದ್ದು, ಈಗಾಗಲೇ 120 ಭರವಸೆಗಳನ್ನು ಈಡೇರಿಸಿದ್ದೇವೆ. ಮುಂದಿನ ಎರಡು ವರ್ಷದಲ್ಲಿ ಮೂಲ ಸೌಕರ್ಯಗಳಿಗೆ ಸರಕಾರ ಹೆಚ್ಚಿನ ಒತ್ತು ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.
 
ರಾಜ್ಯ ಸರಕಾರದ ಮೂರು ವರ್ಷಗಳ ಆಡಳಿತ ತೃಪ್ತಿ ತಂದಿದೆ. ಪಕ್ಷದಲ್ಲಿ ಭಿನ್ನ ಮತ ಸ್ಫೋಟ‌ವಾಗಿದೆ ಮತ್ತು ಕಾಂಗ್ರೆಸ್ ಶಾಸಕರಲ್ಲಿ ಮುನಿಸು ಉಂಟಾಗಿದೆ ಎಂಬ ಸುದ್ದಿಗಳು ಕೇವಲ ಮಾಧ್ಯಮ ಸೃಷ್ಟಿ ಎಂದು ಸಚಿವರು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಅಂಬರೀಶ್ ವಿರುದ್ಧ ಮಂಡ್ಯದಲ್ಲಿ ಪಕ್ಷದಲ್ಲಿಯೇ ಅಪಸ್ವರ