Webdunia - Bharat's app for daily news and videos

Install App

ರಾಜ್ಯ ಸರ್ಕಾರ ಜನರ ಹಣ ಕದ್ದಿದೆ : ರಾಹುಲ್ ಗಾಂಧಿ

Webdunia
ಭಾನುವಾರ, 16 ಏಪ್ರಿಲ್ 2023 (14:40 IST)
ಕೋಲಾರ : ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಜನರ ಹಣ ಕದ್ದಿದೆ. ಏನೇ ಕೆಲಸ ಮಾಡಿದರೂ ಲಂಚ ಹೊಡೆದಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹರಿಹಾಯ್ದರು.

ಕೋಲಾರದಲ್ಲಿ ನಡೆದ ಜೈ ಭಾರತ್ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ 40% ಕಮಿಷನ್ ಬಿಟ್ಟು ಏನೂ ಕೆಲಸ ಮಾಡಿಲ್ಲ. ಬಿಜೆಪಿ ಸರ್ಕಾರ ಜನರ ಹಣ ಕದ್ದಿದೆ. ಏನೇ ಕೆಲಸ ಮಾಡಿದರೂ ಅದರಲ್ಲಿ 40% ಲಂಚ ಹೊಡೆದಿದ್ದಾರೆ. ಇದನ್ನು ನಾನು ಹೇಳುತ್ತಿಲ್ಲ. ಕಂಟ್ರಾಕ್ಟರ್ಗಳು ಮೋದಿಗೆ ಪತ್ರ ಬರೆದು ತಿಳಿಸಿದ್ದಾರೆ. ಮೋದಿ ಆ ಪತ್ರಕ್ಕೆ ಏನೂ ಉತ್ತರ ಕೊಟ್ಟಿಲ್ಲ. ಪತ್ರಕ್ಕೆ ಉತ್ತರ ಕೊಟ್ಟಿಲ್ಲ ಎಂದರೆ ಅದರಲ್ಲಿ ಮೋದಿ ಪಾಲು ಇದೆ ಎಂದು ಆರೋಪಿಸಿದರು. 

ರಾಜ್ಯದಲ್ಲಿ ಟೀಚರ್, ಪೊಲೀಸ್ ಹಾಗೂ ಎಂಜಿನಿಯರ್ ನೇಮಕಾತಿಯಲ್ಲಿ ಹಗರಣ ನಡೆದಿದೆ. ನಾನು ಸಂಸತ್ನಲ್ಲಿ ಈ ವಿಚಾರ ಹಾಗೂ ಅದಾನಿ ವಿಚಾರವಾಗಿ ಕೇಳಿದೆ. ಕೂಡಲೇ ನನ್ನ ಮೈಕ್ ಆಫ್ ಮಾಡಿದರು. ನಿಮಗೂ ಅದಾನಿಗೂ ಏನು ಸಂಬಂಧ ಎಂದು ಕೇಳಿ ನಾನು ಒಂದು ಫೋಟೋ ತೋರಿಸಿದೆ.

ಏನು ಸಂಬಂಧ ಎಂದು ಕೇಳಿದೆ. ದೇಶದ ವಿಮಾನ ನಿಲ್ದಾಣವನ್ನು ಕಾನೂನು ಮೀರಿ ಅದಾನಿಗೆ ಕೊಟ್ಟಿದ್ದಾರೆ. ಅದು ಯಾಕೆ ಕೊಟ್ಟರು ಎಂದು ಕೇಳಿದೆ. ಅದಾನಿಗೆ ವಿಮಾನ ನಿಲ್ದಾಣ ವಿಚಾರದಲ್ಲಿ ಯಾವ ಅನುಭವವೂ ಇಲ್ಲ. ಅವರು ನಿಯಮ ಮೀರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

ಮುಂದಿನ ಸುದ್ದಿ
Show comments