Webdunia - Bharat's app for daily news and videos

Install App

ಸಾಲದ ಸುಳಿಯಲ್ಲಿ ರಾಜ್ಯ ಸರ್ಕಾರ

Webdunia
ಬುಧವಾರ, 2 ಮಾರ್ಚ್ 2022 (16:35 IST)
2020-21ರಲ್ಲಿ ರಾಜ್ಯ ಸರ್ಕಾರ ಒಟ್ಟು ಋಣ ಭಾರ 3,98,219 ಕೋಟಿ ರೂ. ತಲುಪಿತ್ತು. ಇನ್ನು ಪ್ರಸಕ್ತ 2021-22 ಸಾಲಿನಲ್ಲಿ ರಾಜ್ಯ ಸರ್ಕಾರ 71,332 ಕೋಟಿ ರೂ. ಸಾಲ ಮಾಡಲು ನಿರ್ಧರಿಸಿದೆ.ರಾಜ್ಯದ ಒಟ್ಟು ಸಾಲ ಹಾಗೂ ಋಣಭಾರ ಮಾರ್ಚ್ ಅಂತ್ಯಕ್ಕೆ 4,57,899 ಕೋಟಿ ರೂ‌.ಗೆ ಏರಿಕೆಯಾಗಲಿದೆ.
ಸಾಲದ ಮಧ್ಯೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Basavaraj Bommai ) ಬಜೆಟ್ ಮಂಡನೆಗೆ ಅಂತಿಮ ಸಭೆಗಳನ್ನ ನಡೆಸುತ್ತಿದ್ದಾರೆ.ಸಂಪನ್ಮೂಲ ಕೊರತೆಯ ಮಧ್ಯೆ ಬಜೆಟ್ ಮಂಡನೆ ಮಾಡಬೇಕಾಗಿದ್ದು, ಈ ಬಾರಿ ಬಜೆಟ್ ನಿರ್ವಹಣೆಗಾಗಿ ಇನ್ನಷ್ಟು ಸಾಲದ ಮೊರೆ ಹೋಗುವುದು ಅನಿವಾರ್ಯವಾಗಿದೆ.
ಮಾರ್ಚ್ 4ಕ್ಕೆ ಸಿಎಂ ಬೊಮ್ಮಾಯಿ ಮದ್ಯಾಹ್ನ 12:30ಕ್ಕೆ ಚೊಚ್ಚಲ ಬಜೆಟ್ ಮಂಡನೆ ಮಾಡಲಿದ್ದಾರೆ.ಈ ಬಾರಿಯೂ ಬಂಡವಾಳ ವೆಚ್ಚವನ್ನು ಭರಿಸಲು ಸಾಲದ ಮೊರೆಹೋಗುವ ಪರಿಸ್ಥಿತಿ ಎದುರಾಗಿದೆ.ಕಳೆದ ಎರಡು ವರ್ಷದಿಂದ ಕೋವಿಡ್ ಲಾಕ್‌ಡೌನ್ ಹೇರಿದ ಆರ್ಥಿಕ ಸಂಕಷ್ಟಕ್ಕೆ ಆದಾಯ ಮೂಲ ಕುಗ್ಗಿದೆ.ಕೇಂದ್ರ ಸರ್ಕಾರವೂ ರಾಜ್ಯಗಳಿಗೆ ಕಳೆದ ವರ್ಷದಿಂದ ಹೆಚ್ಚುವರಿ ಸಾಲ ಪಡೆಯಲು ಅನುಮತಿ ನೀಡಿದೆ.
 
2022-23 ಸಾಲಿನಲ್ಲಿ ರಾಜ್ಯದ ಒಟ್ಟು ಸಾಲ 5,12,585 ಕೋಟಿ ರೂ. ತಲುಪುವ ಅಂದಾಜಿಸಲಾಗಿದೆ. ಅದೇ 2023-24ಕ್ಕೆ ರಾಜ್ಯದ ಒಟ್ಟು ಸಾಲ ಅಂದಾಜು 5,73,790 ಕೋಟಿ ರೂ. ತಲುಪಲಿದೆ. ಅದೇ 2024-25ರಲ್ಲಿ ರಾಜ್ಯದ ಒಟ್ಟು ಸಾಲದ ಹೊರೆ 6,42,578 ಕೋಟಿ ರೂ.ಗೆ ತಲುಪುವ ಅಂದಾಜು ಮಾಡಲಾಗಿದೆ. 2022-23ರಲ್ಲಿ ರಾಜ್ಯ ಸರ್ಕಾರ ಸುಮಾರು 75,000-80,000 ಕೋಟಿ ರೂ. ಸಾಲ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. 2020-21 ಸಾಲಿಗೆ ಹೋಲಿಸಿದರೆ ಪ್ರಸಕ್ತ ವರ್ಷದಲ್ಲಿ ಸಾಲದ‌ ಪ್ರಮಾಣ ಸುಮಾರು 34% ಹೆಚ್ಚಳವಾಗಿದೆ. ಈ ಬಾರಿ ಸಾಲದ ಪ್ರಮಾಣ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಸಿದ್ದರಾಮಯ್ಯಗೆ ಆರ್ ಎಸ್ಎಸ್ ಬಗ್ಗೆ ವಿವರವಾಗಿ ಹೇಳಿದ ಬಿವೈ ವಿಜಯೇಂದ್ರ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments