Webdunia - Bharat's app for daily news and videos

Install App

ರೈತರ ವಿಷಯದಲ್ಲಿ ಸರಕಾರ ಪಲಾಯನವಾದ: ಕುಮಾರಸ್ವಾಮಿ

Webdunia
ಮಂಗಳವಾರ, 22 ನವೆಂಬರ್ 2016 (16:25 IST)
ರಾಜ್ಯ ಸರಕಾರ ರೈತರ ವಿಷಯದಲ್ಲಿ ಯಾವುದೇ ನಿರ್ಧಾರ ಕೈಗೊಳ್ಳದೇ ಪಲಾಯನ ಮಾಡುತ್ತಿದೆ. ಆದರೆ, ನ್ಯಾಯಯುತವಾಗಿ ಹೋರಾಟ ಮಾಡುವ ರೈತರನ್ನು ಬಂಧಿಸುವ ಮೂಲಕ ರೈತರ ಧ್ವನಿಯನ್ನು ಕುಗ್ಗಿಸುವ ಪ್ರಯತ್ನ ಮಾಡುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 
ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಭೀಕರ ಬರಗಾಲ ಪರಿಸ್ಥಿತಿ ಎದುರಾಗಿದ್ದು, 30 ಪ್ರತಿಶತ ಕಬ್ಬು ಬೆಳೆ ಕುಸಿದಿದೆ. ರೈತರಿಗೆ ಕನಿಷ್ಠ 3 ಸಾವಿರ ರೂಪಾಯಿ ಬೆಂಬಲ ಬೆಲೆಯನ್ನು ಅಧಿವೇಶನದಲ್ಲಿ ಘೋಷಣೆ ಮಾಡಲೇಬೇಕು ಎಂದು ಆಗ್ರಹಿಸಿದರು.
 
ಅಧಿವೇಶನದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ರಾಜ್ಯದ ರೈತರ ಸಮಸ್ಯೆಗಳ ಕುರಿತು ದೀರ್ಘವಾಗಿ ಚರ್ಚಿಸಲು ಜೆಡಿಎಸ್ ತೀರ್ಮಾನಿಸಿದೆ. ಅಧಿವೇಶನದ ಮೇಲೆ ರಾಜ್ಯದ ಜನರು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎಂದರು. 
 
ಮಹದಾಯಿ ಹೋರಾಟದಲ್ಲಿ ಬಂಧನಕ್ಕೊಳಗಾದ ರೈತರ ಮೇಲಿನ ಪ್ರಕರಣವನ್ನು ರಾಜ್ಯ ಸರಕಾರ ಹಿಂಪಡೆಯುವಂತೆ ಸದನದಲ್ಲಿ ಒತ್ತಾಯಿಸಲಾಗುವುದು. ಒಂದು ವೇಳೆ, ರೈತರ ಮೇಲಿನ ಮೊಕದ್ದಮೆ ಹಿಂಪಡೆಯದೇ, ರೈತರ ಮೇಲಿನ ದೌರ್ಜನ್ಯ ಮುಂದುವರೆಸಿದರೆ ರಾಜ್ಯದ್ಯಂತ ಉಗ್ರ ಹೋರಾಟ ಕೈಗೊಳ್ಳುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಿಗೆ ವಿಶೇಷ ಎಚ್ಚರಿಕೆ

Indian Army: ಗಡಿಯಲ್ಲಿ ಕಾಲು ಕೆರೆದುಕೊಂಡ ಪಾಕಿಸ್ತಾನ: ಭಾರತೀಯ ಯೋಧರ ಪ್ರತಿದಾಳಿಗೆ ಪಾಕ್ ಸೈನಿಕರು ಫಿನಿಶ್ (Video)

Indus Water treaty: ಸಿಂಧೂ ನದಿ ಒಪ್ಪಂದ ಎಂದರೇನು, ಇದನ್ನ ಮಾಡಿದವರು ಯಾರು: ಪಾಕಿಸ್ತಾನಕ್ಕೆ ಆಗುವ ನಷ್ಟವೇನು

Pahalgram: ಸಕಲ ಸರ್ಕಾರಿ ಗೌರವಗಳೊಂದಿಗೆ ಮಂಜುನಾಥ್‌, ಭರತ್ ಭೂಷಣ್‌ಗೆ ಅಂತ್ಯಕ್ರಿಯೆ

Pehlagam ಪ್ರವಾಸಿಗರ ರಕ್ಷಣೆಗೆ ಹೋಗಿ ಜೀವ ಕಳೆದುಕೊಂಡ ಮುಸ್ಲಿಂ ಯುವಕ, ತಂದೆಯ ಮಾತು ಕೇಳಿದ್ರೆ ಮೈ ರೋಮಾಂಚನ

ಮುಂದಿನ ಸುದ್ದಿ
Show comments