Select Your Language

Notifications

webdunia
webdunia
webdunia
webdunia

ವರ್ಷಾಚರಣೆ ದೌರ್ಜನ್ಯ: ರಾಜ್ಯ ಸರಕಾರವೇ ನೇರ ಹೊಣೆ ಎಂದ ಮುತಾಲಿಕ್

ವರ್ಷಾಚರಣೆ ದೌರ್ಜನ್ಯ:  ರಾಜ್ಯ ಸರಕಾರವೇ ನೇರ ಹೊಣೆ ಎಂದ ಮುತಾಲಿಕ್
ಬೆಳಗಾವಿ , ಬುಧವಾರ, 4 ಜನವರಿ 2017 (15:18 IST)
ಡಿಸೆಂಬರ್ 31ರ ರಾತ್ರಿ ಯುವತಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ರಾಜ್ಯ ಸರಕಾರವೇ ನೇರ ಹೊಣೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ವರ್ಷಾಚರಣೆಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಖಂಡನೀಯ. ವಿಕೃತ ಮೆರೆದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು. 
 
ಹೊಸ ವರ್ಷಾಚರಣೆ ವಿದೇಶಿ ಸಂಸ್ಕೃತಿ. ಮೊದಲಿನಿಂದಲೂ ಹಿಂದೂಪರ ಸಂಘಟನೆಗಳು ಪಾಶ್ಚಾತ್ಯ ಸಂಸ್ಕೃತಿಯನ್ನು ವಿರೋಧಿಸುತ್ತ ಬಂದಿವೆ. ಮಧ್ಯರಾತ್ರಿಯವರೆಗೂ ಹೊಸ ವರ್ಷಾಚರಣೆಗೆ ಅವಕಾಶ ಕಲ್ಪಿಸಿರುವುದೇ ಈ ಹೇಯ ಕೃತ್ಯಕ್ಕೆ ಕಾರಣ. ಇನ್ನಾದರೂ ರಾಜ್ಯ ಸರಕಾರ ಹೊಸ ವರ್ಷಾಚರಣೆಯನ್ನು ನಿಷೇಧಿಸಬೇಕು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಎಂದು ಆಗ್ರಹಿಸಿದರು.  
 
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಎಂಜಿ ರಸ್ತೆಯಲ್ಲಿ ನೆರೆದಿದ್ದ ಮಹಿಳೆಯರನ್ನು ಲೈಂಗಿಕವಾಗಿ ಹಿಂಸಿಸಿದ್ದರು. ಈ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಭದ್ರತೆಗೆಂದು ಸಾವಿರಾರು ಪೊಲೀಸರ ನಿಯೋಜನೆಗೊಂಡಿದ್ದರಾದರೂ ಕಿಡಿಗೇಡಿಗಳನ್ನು ನಿಯಂತ್ರಿಸಲು ವಿಫಲರಾಗಿದ್ದರು. ಈ ಘಟನೆ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಲೈಂಗಿಕ ದೌರ್ಜನ್ಯ ಪ್ರಕರಣ: ಸಚಿವೆ ಉಮಾಶ್ರೀ ಕಿಡಿ