Select Your Language

Notifications

webdunia
webdunia
webdunia
webdunia

ಕೆಆರ್‌ಎಸ್‌ ಉದ್ಯಾನವನದಲ್ಲಿ ಕಾವೇರಿ ಆರತಿಗೆ ರಾಜ್ಯ ಸರ್ಕಾರ ಚಿಂತನೆ

ಕಾವೇರಿ ಆರತಿ

Sampriya

ಬೆಂಗಳೂರು , ಬುಧವಾರ, 25 ಜೂನ್ 2025 (18:54 IST)
ಉತ್ತರ ಭಾರತದ ಗಂಗಾ ಆರತಿ ಮಾದರಿಯಲ್ಲೇ ಕರ್ನಾಟಕದ ಜೀವನದಿ ಕಾವೇರಿಗೆ ಆರತಿ ಸಲ್ಲಿಸುವ ಅದ್ಧೂರಿ ಕಾರ್ಯಕ್ರಮ ಆಯೋಜನೆಗೆ ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ. 

ಮೊದಲ ಬಾರಿ ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಈ ಆರತಿ ಕಾರ್ಯಕ್ರಮವನ್ನು ಖುದ್ದಾಗಿ ಡಿಸಿಎಂ ಡಿಕೆ ಶಿವಕುಮಾರ್‌ ಅವರು ನೆರವೇರಿಸಿದ್ದರು. ಇದೀಗ ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಉದ್ಯಾನವನದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಸುವ ಬಗ್ಗೆ ಅಪ್ಡೇಟ್‌ ಅನ್ನು ನೀಡಿದ್ದಾರೆ. 

ಇಂದು ಈ ಕಾರ್ಯಕ್ರಮ ಸಂಬಂಧ ಉನ್ನತ ಮಟ್ಟದ ಸಭೆ ನಡೆಸಿದ್ದು, ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಬಾರಿ ರಾಜ್ಯದಲ್ಲಿ ಮಳೆಗಾಲದ ಆರಂಭದಲ್ಲೇ ಉತ್ತಮ ಮಳೆಯಾಗಿದ್ದು, ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಇನ್ನು ಕಾವೇರಿ ಕೂಡ ಉಕ್ಕಿ ಹರಿಯುತ್ತಿದ್ದಾಳೆ. ಉತ್ತಮ ಮಳೆ ಹಿನ್ನೆಲೆ ಇದೇ ಹೊತ್ತಿನಲ್ಲಿ ಕಾವೇರಿ ಆರತಿ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಸಜ್ಜಾಗಿದೆ.




Share this Story:

Follow Webdunia kannada

ಮುಂದಿನ ಸುದ್ದಿ

CBSE ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹೊಸ ಪದ್ಧತಿ: ಮುಂದಿನ ವರ್ಷದಿಂದಲೇ ಜಾರಿಗೆ