Select Your Language

Notifications

webdunia
webdunia
webdunia
webdunia

ಇಬ್ಬರು ಸಚಿವರ ಜಿಲ್ಲಾ ಉಸ್ತುವಾರಿ ಬದಲಿಸಿ ರಾಜ್ಯ ಸರ್ಕಾರ ಆದೇಶ

ಇಬ್ಬರು ಸಚಿವರ ಜಿಲ್ಲಾ ಉಸ್ತುವಾರಿ ಬದಲಿಸಿ ರಾಜ್ಯ ಸರ್ಕಾರ ಆದೇಶ
bangalore , ಶನಿವಾರ, 30 ಜುಲೈ 2022 (17:17 IST)
ಈ ಹಿಂದೆ ತಮ್ಮ ಉಸ್ತುವಾರಿ ಜಿಲ್ಲೆಯಿಂದ ಸಾರಥ್ಯ ಕಳೆದುಕೊಂಡಿದ್ದ ಸಚಿವ ಆನಂದ್ ಸಿಂಗ್ (Anand Singh) ಮತ್ತೆ ತವರು ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.
 
ಹೌದು, ರಾಜ್ಯ ಬಿಜೆಪಿ ಸರ್ಕಾರ ಇಬ್ಬರು ಸಚಿವರ ಜಿಲ್ಲಾ ಉಸ್ತುವಾರಿಯನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಸರ್ಕಾರದ ಆದೇಶದಿಂದ ಸಚಿವ ಆನಂದ್ ಸಿಂಗ್ ಫುಲ್ ಖುಷ್ ಆಗಿದ್ದಾರೆ.
 
ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್  ಅವರಿಗೆ ತವರು ಜಿಲ್ಲೆ ವಿಜಯನಗರ ಹಾಗೂ ವಕ್ಫ್ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕೊಪ್ಪಳ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ.
 
ಈ ಹಿಂದೆ ಹಲವು ಸಚಿವರ ಜಿಲ್ಲಾ ಉಸ್ತುವಾರಿಯನ್ನು ಬದಲಾವಣೆ ಮಾಡಲಾಗಿತ್ತು. ಆನಂದ್ ಸಿಂಗ್ ಅವರು ತಮಗೆ ತವರು ಜಿಲ್ಲೆಯ ಉಸ್ತುವಾರಿ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದರು. ಅವರ ಮನವಿ ಮೇರೆಗೆ ವಿಜಯನಗರ ಜಿಲ್ಲೆಯ ಉಸ್ತುವಾರಿಯನ್ನು ನೀಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಲಗಿದ ಬಾಲಕಿಗೆ ಕಚ್ಚಿದ ಸರ್ಪ