Select Your Language

Notifications

webdunia
webdunia
webdunia
webdunia

ನರೇಗಾ ಯೋಜನೆಗೆ ಹಣ ನೀಡುವಂತೆ ಕೇಂದ್ರ ಸರಕಾರಕ್ಕೆ ಮನವಿ: ಎಚ್‌.ಕೆ.ಪಾಟೀಲ್

ಕನ್ನಡ ಪ್ರಾದೇಶಿಕ
ಬೆಂಗಳೂರು , ಗುರುವಾರ, 18 ಆಗಸ್ಟ್ 2016 (16:00 IST)
ನರೇಗಾ ಯೋಜನೆಯಲ್ಲಿ 288 ಕೋಟಿ ರೂಪಾಯಿ ಬಾಕಿ ಉಳಿದಿದೆ. ಜೂನ್ 2 ರಿಂದ ಕೂಲಿ ಹಣ ನೀಡಲು ಕೇಂದ್ರ ಸರಕಾರ ಹಣ ನೀಡಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಎಚ್‌.ಕೆ.ಪಾಟೀಲ್ ಹೇಳಿದರು.
 
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಿಂದ ರಾಜ್ಯಕ್ಕೆ 288 ಕೋಟಿ ರೂಪಾಯಿ ಬಾಕಿ ಹಣ ಉಳಿದಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆಯಲಿದ್ದಾರೆ ಎಂದು ತಿಳಿಸಿದ್ದಾರೆ.
 
ಇಲಾಖೆಯ ಅಧಿಕಾರಿಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ಪಡೆದುಕೊಂಡಿದ್ದು, ಕಾಮಗಾರಿ ವಿಳಂಬವನ್ನು ಸರಿಪಡಿಸಿಕೊಳ್ಳುವಂತೆ ಮುಖ್ಯಮಂತ್ರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಎಚ್‌.ಕೆ.ಪಾಟೀಲ್ ತಿಳಿಸಿದ್ದಾರೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

637 ನೂತನ ಅತ್ಯಾಧುನಿಕ ಬಸ್‌ಗಳಿಗೆ ಸಿಎಂ ಸಿದ್ದರಾಮಯ್ಯ ಹಸಿರು ನಿಶಾನೆ