Select Your Language

Notifications

webdunia
webdunia
webdunia
webdunia

ಮಧ್ಯರಾತ್ರಿಯಿಂದಲೇ ಕಾವೇರಿಯಿಂದ ತಮಿಳುನಾಡಿಗೆ 3 ಟಿಎಂಸಿ ನೀರು ಹರಿಸಲಿರುವ ಸರಕಾರ

ಮಧ್ಯರಾತ್ರಿಯಿಂದಲೇ ಕಾವೇರಿಯಿಂದ ತಮಿಳುನಾಡಿಗೆ 3 ಟಿಎಂಸಿ ನೀರು ಹರಿಸಲಿರುವ ಸರಕಾರ
ಬೆಂಗಳೂರು , ಸೋಮವಾರ, 3 ಅಕ್ಟೋಬರ್ 2016 (19:43 IST)
ಕಾವೇರಿ ವಿಚಾರವಾಗಿ ಉಭಯ ಸದನಗಳಲ್ಲಿ ಸರಕಾರದ ನಿರ್ಣಯ ಅಂಗೀಕಾರವಾದ ಹಿನ್ನೆಲೆಯಲ್ಲಿ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಯುವುದು ಬಹುತೇಕ ಖಚಿತಗೊಂಡಿದೆ.
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 23 ರಂದು ಕರೆಯಲಾಗಿದ್ದ ಒಂದು ದಿನದ ವಿಶೇಷ ಅಧಿವೇಶನದಲ್ಲಿ ಕೈಗೊಳ್ಳಲಾಗಿರುವ ನಿರ್ಣಯದಲ್ಲಿ ಸ್ವಲ್ಪ ಬದಲಾವಣೆ ಮಾಡಿ ಕುಡಿಯುವ ನೀರಿನ ಜೊತೆಗೆ ರೈತರ ಬೆಳೆಗೆ ನೀರು ಬಿಡುವು ನಿರ್ಣಯವನ್ನು ರಾಜ್ಯ ಸರಕಾರ ಕೈಗೊಂಡಿದೆ. 
 
ಕುಡಿಯುವ ನೀರಿನ ಜೊತೆಗೆ ರೈತರ ಬೆಳೆಗೆ ನೀರು ಬಿಡುವು ನಿರ್ಣಯವನ್ನು ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಮಂಡನೆ ಮಾಡುವ ಮೂಲಕ ಪರೋಕ್ಷವಾಗಿ ತಮಿಳುನಾಡಿಗೆ ನೀರು ಬಿಡಲು ರಾಜ್ಯ ಸರಕಾರ ಸಿದ್ಧವಾಗಿದೆ. 
 
ಒಣಗುತ್ತಿರುವ ರೈತರ ಬೆಳೆಗೆ ನೀರು ಬಿಡಬೇಕಾಗಿದೆ. ರೈತರಿಗೆ ನೀರು ಬಿಟ್ಟರೇ ತಂತಾನೇ ತಮಿಳುನಾಡಿಗೆ 3 ಟಿಎಂಸಿ ನೀರು ಹರಿದು ಹೋಗುತ್ತದೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಸುಪ್ರೀಂಕೋರ್ಟ್ ಆದೇಶ ಪಾಲಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕುಡಿಯುವ ನೀರು ಮೂಲಭೂತ ಹಕ್ಕು: ಸಿಎಂ ಸಿದ್ದರಾಮಯ್ಯ