Webdunia - Bharat's app for daily news and videos

Install App

ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಓಲೈಸಲು ಕ್ಯಾಬಿನೆಟ್ ದುರುಪಯೋಗಿಸುತ್ತಿದೆ: ಜಗದೀಶ್ ಶೆಟ್ಟರ್

Sampriya
ಶನಿವಾರ, 12 ಅಕ್ಟೋಬರ್ 2024 (15:13 IST)
ಬೆಳಗಾವಿ: ಕಾಂಗ್ರೆಸ್ ಸರ್ಕಾರವು ಅಲ್ಪಸಂಖ್ಯಾತರ ಮತ ಗಟ್ಟಿಗೊಳಿಸುವ ಸಲುವಾಗಿ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ವಾಪಾಸ್ ಪಡೆಯುವ ನಿರ್ಣಯ ಕೈಗೊಂಡು,  ಕಾನೂನುಬಾಹಿರ ಕೆಲಸ ಮಾಡಿದೆ ಎಂದು ಸಂಸದ ಜಗದೀಶ ಶೆಟ್ಟರ್ ಗಂಭೀರ ಆರೋಪ ಮಾಡಿದ್ದಾರೆ.

ಇಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಮೂಲಕ ಕಾಂಗ್ರೆಸ್ ಕ್ಯಾಬಿನೆಟ್‌ ದುರುಪಯೋಗ ಪಡಿಸಿಕೊಂಡಿದೆ. ಇದೊಂದು ಗಂಭೀರ ಪ್ರಕರಣ.  ಈ ಪ್ರಕರಣ ಹಿಂದಕ್ಕೆ ಪಡೆಯುವ ಕುರಿತಾಗಿ ಸರ್ಕಾರವು ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯ ವಾಪಸ್‌ ಪಡೆಯದಿದ್ದರೆ, ಬಿಜೆಪಿಯಿಂದ ಉಗ್ರಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟರು.

ಗೃಹ ಇಲಾಖೆ ಮೂಲಕ ಸಿದ್ದರಾಮಯ್ಯ ಈ ವಿಷಯವನ್ನು ಸಂಪುಟದ ಗಮನಕ್ಕೆ ತಂದಿದ್ದಾರೆ. ಆ ಕಡತದಲ್ಲಿರುವ ವಿಚಾರಗಳನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದ ಅವರು, ಈ ಹಿಂದೆಯೂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪಿಎಫ್‌ಐ ಮೇಲಿನ ಪ್ರಕರಣ ಹಿಂದಕ್ಕೆ ಪಡೆದಿತ್ತು. ಇದರಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿತ್ತು ಎಂದು ಆರೋಪಿಸಿದರು.

ಮುಡಾ ಹಗರಣದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡದೆ ಭಂಡತನ ಪ್ರದರ್ಶಿಸುತ್ತಿರುವ ಸಿದ್ದರಾಮಯ್ಯ ಅವರು, ಜನರ ಗಮನ ಬೇರೆಡೆ ಸೆಳೆಯಲು ಈ ರೀತಿ ಪ್ರಯತ್ನಿಸುತ್ತಿದ್ದಾರೆ. ಸಾರ್ವಜನಿಕ ಹಿತಾಸಕ್ತಿಗಾಗಿ ನಡೆದ ಹೋರಾಟದಲ್ಲಿ ಭಾಗಿಯಾದವರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ನಾವು ಹಿಂದಕ್ಕೆ ಪಡೆದಿದ್ದೇವೆ. ಆದರೆ, ಈ ಪ್ರಕರಣ ಹಿಂದಕ್ಕೆ ಪಡೆಯುವಂಥದ್ದಲ್ಲ. ಇದನ್ನು ವಾಪಸ್‌ ಪಡೆಯುವುದಾದರೆ, ಮಹದಾಯಿ ಹೋರಾಟದಲ್ಲಿ ರೈತರ ಮೇಲೆ ಪ್ರಕರಣ ಏಕೆ ಹಿಂದಕ್ಕೆ ಪಡೆಯಲಿಲ್ಲ ಎಂದು ಪ್ರಶ್ನಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments