ಕ್ರಿಶ್ಚಿಯನ್ ಹೊಸ ಜಾತಿಗಳಿಗೆ ಕೊನೆಗೂ ಕೊಕ್ ಕೊಡಲು ನಿರ್ಧರಿಸಿದ ರಾಜ್ಯ ಸರ್ಕಾರ

Krishnaveni K
ಶುಕ್ರವಾರ, 19 ಸೆಪ್ಟಂಬರ್ 2025 (09:14 IST)
ಬೆಂಗಳೂರು: ಜಾತಿಗಣತಿ ಕಾಲಂನಲ್ಲಿ ವಿವಾದಕ್ಕೀಡಾಗಿದ್ದ ಕ್ರಿಶ್ಚಿಯನ್ ಧರ್ಮದಲ್ಲಿ ಹಿಂದೂ ಜಾತಿಗಳ ಸೇರ್ಪಡೆಗೆ ಕೊನೆಗೂ ರಾಜ್ಯ ಸರ್ಕಾರ ಕೊಕ್ ನೀಡಲು ತಿರ್ಮಾನಿಸಿದೆ.

ನಿನ್ನೆ ಸಂಪುಟ ಸಭೆಯಲ್ಲಿ ಸಚಿವರಿಂದ ಈ ವಿವಾದಿತ ಜಾತಿಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ವಿಶೇಷವಾಗಿ ಲಿಂಗಾಯತ ಸಮುದಾಯದ ಸಚಿವರು ಸಿಎಂ ಸಿದ್ದರಾಮಯ್ಯ ಎದುರು ರೋಷಾವೇಷ ಪ್ರದರ್ಶಿಸಿದ್ದರು. ಇದರಿಂದ ಸ್ವತಃ ಸಿಎಂ ಶಾಕ್ ಗೊಳಗಾಗಿದ್ದರು.

ಈ ಹೊಸ ಜಾತಿಗಳನ್ನು ಸೃಷ್ಟಿಸಲು ಅಧಿಕಾರ ಕೊಟ್ಟಿದ್ದು ಯಾರು ಎಂದು ಸಚಿವ ಈಶ್ವರ ಖಂಡ್ರೆ ಪ್ರಶ್ನಿಸಿದ್ದರು. ಇನ್ನು ಎಂಬಿ ಪಾಟೀಲ್ ಕೂಡಾ ಕೂಗಾಡಿದ್ದರು. ಈ ವಿವಾದಿತ ಜಾತಿಗಣತಿಯಿಂದ ನಮಗೇ ತೊಂದರೆಯಾಗಬಹುದು. ಜಾತಿಗಣತಿ ಮುಂದೂಡಿಕೆ ಮಾಡಿ ಎಂದು ಆಗ್ರಹಿಸಿದ್ದರು.

ಇದೀಗ ವಿವಾದಿತ ಲಿಂಗಾಯತ ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್, ಕುರುಬ ಕ್ರಿಶ್ಚಿಯನ್ ಎಂಬಿತ್ಯಾದಿ ಹಿಂದೂ ಜಾತಿಗಳ ಸೇರ್ಪಡೆಯನ್ನು ಕೈ ಬಿಡಲಾಗಿದೆ. ಕ್ರಿಶ್ಚಿಯನ್ ಧರ್ಮದ ಜೊತೆ ಹಿಂದೂ ಜಾತಿಗಳನ್ನು ಸೇರಿಸಿದ್ದು ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಆದರೆ ಈಗ ವಿವಾದಿತ ಅಂಶವನ್ನು ಕೈ ಬಿಡಲು ತೀರ್ಮಾನಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ದಿಢೀರನೇ ತುಮಕೂರು ಪ್ರವಾಸವನ್ನು ರದ್ದು ಮಾಡಿದ ಸಿಎಂ, ಇದೇ ಕಾರಣ

ಮುಂದಿನ ಸುದ್ದಿ
Show comments