85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ರಾಜ್ಯಮಟ್ಟದ ಚಿತ್ರ, ಶಿಲ್ಪ ಹಾಗೂ ಛಾಯಾಚಿತ್ರ ಕಲೆ ಸ್ಪರ್ಧೆ

Webdunia
ಸೋಮವಾರ, 13 ಜನವರಿ 2020 (18:59 IST)
ಕಲಬುರಗಿಯಲ್ಲಿ  ಫೆಬ್ರುವರಿ 5, 6 ಹಾಗೂ 7ರಂದು ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ರಾಜ್ಯದ ದೃಶ್ಯಕಲಾವಿದರಿಗಾಗಿ ಕಲಾ ಸ್ಪರ್ಧೆ ಆಯೋಜಿಸಲಾಗಿದೆ.

ರಾಜ್ಯಮಟ್ಟದ ಚಿತ್ರ, ಶಿಲ್ಪ ಹಾಗೂ ಛಾಯಾಚಿತ್ರ ಕಲೆ ಸ್ಪರ್ಧೆ ಹಾಗೂ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ಅರ್ಹ ಕಲಾವಿದರಿಂದ ಕಲಾಕೃತಿಗಳನ್ನು ಆಹ್ವಾನಿಸಲಾಗಿದೆ.

ಕಲಾಕೃತಿಗಳು ಡ್ರಾಯಿಂಗ, ಪೇಂಟಿಂಗ ಹಾಗೂ ಗ್ರಾಫಿಕ್ ಪ್ರಕಾರಗಳಲ್ಲಿ ರಚನೆಯಾಗಿರಬೇಕು. ಕಲಾಕೃತಿಗಳು ಜಲವರ್ಣ, ತೈಲವರ್ಣ, ಡ್ರಾಯಿಂಗ ಅಥವಾ ಮಿಶ್ರಮಾಧ್ಯಮಗಳಲ್ಲಿ ಒಂದಾಗಿರಬೇಕು. ಕಲಾಕೃತಿ ಅಳತೆಯು  3*3 ಅಡಿ ಮೀರಿರಬಾರದು. 1*1 ಅಡಿಗಿಂತ ಕಡಿಮೆ ಇರಬಾರದು. ಕಲಾಕೃತಿಗಳನ್ನು ಸ್ಪರ್ಧೆಗೆ ತಲುಪಿಸುವ ಜವಾಬ್ದಾರಿ ಕಲಾವಿದರದಾಗಿದೆ. ಕಲಾಕೃತಿಯು ಸುಂದರ ಫ್ರೇಮ್‍ನೊಂದಿಗೆ ಸಲ್ಲಿಸಬೇಕು. ಕಲಾಕೃತಿಯ ಜೊತೆಗೆ ಕಲಾವಿದರ ಸ್ವವಿವರವುಳ್ಳ ಪರಿಚಯ ಪತ್ರ ಹಾಗೂ ಎರಡು ಭಾವಚಿತ್ರಗಳನ್ನು ಸಹ ನೀಡಬೇಕು.

ಈ ಕಲಾಕೃತಿಗಳನ್ನು ಆಯ್ಕೆ ಸಮಿತಿಯಿಂದ ಆಯ್ಕೆ ಮಾಡಲಾಗುತ್ತದೆ. ಒಟ್ಟು 10 ನಗದು ಪ್ರಶಸ್ತಿಗಳಿದ್ದು, ನೆನಪಿನ ಕಾಣಿಕೆ ಹಾಗೂ ಪ್ರಮಾಣಪತ್ರ ಒಳಗೊಂಡಿರುತ್ತದೆ. ಪ್ರದರ್ಶನದಲ್ಲಿ ಆಯ್ಕೆಯಾದ ಎಲ್ಲಾ ಕಲಾವಿದರಿಗೆ ಪ್ರಮಾಣಪತ್ರ ಹಾಗೂ ನೆನಪಿನ ಕಾಣಿಕೆಗಳನ್ನು ನೀಡಲಾಗುತ್ತದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments