Webdunia - Bharat's app for daily news and videos

Install App

ರಾಜ್ಯದಲ್ಲಿರುವ ಚರ್ಚ್​ಗಳ ಸಮೀಕ್ಷೆ ನಡೆಸುವಂತೆ ರಾಜ್ಯ ಅಲ್ಪಸಂಖ್ಯಾತರ ನಿರ್ದೇಶನಾಲಯದ ಆದೇಶ

Webdunia
ಸೋಮವಾರ, 25 ಅಕ್ಟೋಬರ್ 2021 (22:02 IST)
ಬೆಂಗಳೂರು: ರಾಜ್ಯದಲ್ಲಿರುವ ಚರ್ಚ್​ಗಳ ಸಮೀಕ್ಷೆ ನಡೆಸುವಂತೆ ರಾಜ್ಯ ಅಲ್ಪಸಂಖ್ಯಾತರ ನಿರ್ದೇಶನಾಲಯದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಚರ್ಚ್​ಗಳ ಸಮೀಕ್ಷೆ ಪ್ರಶ್ನಿಸಿ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಸಿಜೆ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿದ್ದ ಪೀಠ, ಈ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಲ್ಪಸಂಖ್ಯಾತ ನಿರ್ದೇಶನಾಲಯದ ನಿರ್ದೇಶಕರಿಗೆ ನೋಟಿಸ್ ನೀಡಿದೆ.
ಇದಕ್ಕೂ ಮುನ್ನ ನಡೆದ ವಿಚಾರಣೆ ವೇಳೆ, ಅರ್ಜಿದಾರರ ಪರ ವಕೀಲರಾದ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿ, ಕ್ರಿಶ್ಚಿಯನ್ ಸಮುದಾಯವನ್ನು ಗುರಿಯಾಗಿಸಿಕೊಂಡು ರಾಜ್ಯ ಸರ್ಕಾರ ಕೈಗೊಂಡಿರುವ ಈ ನಿರ್ಧಾರ ಅತ್ಯಂತ ತಾರತಮ್ಯದಿಂದ ಕೂಡಿದೆ. ಅಷ್ಟೇ ಅಲ್ಲ ಧಾರ್ಮಿಕ ಸ್ವಾತಂತ್ರ್ಯಕ್ಕೆ ಅಡ್ಡಿ ಉಂಟು ಮಾಡುತ್ತದೆ.ಯಾವುದೇ ಕಾನೂನಿನ ಆಧಾರವಿಲ್ಲದೆ, ಒಂದು ಧರ್ಮವನ್ನು ಗುರಿಯಾಗಿಸಿಕೊಂಡು ಸಮೀಕ್ಷೆಗೆ ಆದೇಶಿಸಿರುವ ಸರ್ಕಾರದ ಆದೇಶ ಅಸಂವಿಧಾನಿಕ ಕ್ರಮ. ಈ ಹಿಂದೆಯೂ ಸರ್ಕಾರ ಇದೇ ರೀತಿ ಪೊಲೀಸ್ ಮೂಲಕ ಮಾಹಿತಿ ಸಂಗ್ರಹಕ್ಕೆ ಮುಂದಾಗಿತ್ತು. ಇದೀಗ ಇಲಾಖೆ ಮೂಲಕವೇ ಮಾಹಿತಿ ಸಂಗ್ರಹಕ್ಕೆ ಮುಂದಾಗಿದೆ. ಹೀಗಾಗಿ, ಆದೇಶಕ್ಕೆ ಮಧ್ಯಂತರ ತಡೆ ನೀಡಬೇಕು ಎಂದು ಕೋರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಪ್ರಕರಣದಲ್ಲಿ ಮಧ್ಯಂತರ ತಡೆ ನೀಡುವ ಅಂಶಗಳನ್ನು ತಾವು ಉಲ್ಲೇಖಿಸಿಲ್ಲ ಎಂದು ಅಭಿಪ್ರಾಯಪಟ್ಟು ಸಮೀಕ್ಷೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿತು. ಸರ್ಕಾರ ಆಕ್ಷೇಪಣೆ ಸಲ್ಲಿಸಿದ ಬಳಿಕ ಈ ಕುರಿತು ವಿಚಾರಣೆ ನಡೆಸುವುದಾಗಿ ತಿಳಿಸಿ, ವಿಚಾರಣೆಯನ್ನು 3 ವಾರಗಳ ಕಾಲ ಮುಂದೂಡಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments