Webdunia - Bharat's app for daily news and videos

Install App

ದೆಹಲಿಯಲ್ಲಿ ಧರಣಿ ನಡೆಸಿದ ರಾಜ್ಯದ ಸಂಸದರು!

Webdunia
ಗುರುವಾರ, 27 ಡಿಸೆಂಬರ್ 2018 (18:17 IST)
ರಾಜ್ಯದ ಸಂಸದರು ಸಂಸತ್ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದಾರೆ.

ಕಾವೇರಿ ನದಿಗೆ ಅಡ್ಡಲಾಗಿ ಕಟ್ಟುತ್ತಿರುವ ಮೇಕೆದಾಟು ಅಣೆಕಟ್ಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ತಮಿಳುನಾಡು ಸರ್ಕಾರದ ನಡೆಯನ್ನು ವಿರೋಧಿಸಿ ರಾಜ್ಯದ ಸಂಸದರು ಸಂಸತ್ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.

ಮೇಕೆದಾಟು ಯೋಜನೆಯನ್ನು ಶೀಘ್ರ ಕೈಗೆತ್ತಿಕೊಳ್ಳಲು ಕರ್ನಾಟಕ ಸರ್ಕಾರಕ್ಕೆ ಹಸಿರು ನಿಶಾನೆ ತೋರಬೇಕು ಎಂದು ಒತ್ತಾಯಿಸಿ ರಾಜ್ಯದ ಸಂಸದರು ಪಕ್ಷಾತೀತವಾಗಿ ಧರಣಿ ನಡೆಸಿದರು.

ಪ್ರತಿಭಟನೆಯಲ್ಲಿ ಡಿ.ಕೆ ಸುರೇಶ್, ಶೋಭಾಕರಂದ್ಲಾಜೆ, ಪ್ರಕಾಶ್ ಹುಕ್ಕೇರಿ, ಸುರೇಶ್ ಅಂಗಡಿ, ಪ್ರಹ್ಲಾದ್ ಜೋಷಿ, ಶಿವರಾಮೇಗೌಡ, ಧೃವ ನಾರಾಯಣ, ಜಿ.ಎಂ. ಸಿದ್ದೇಶ್ವರ್, ರಾಜ್ಯಸಭಾ ಸದಸ್ಯರಾದ ಬಿ.ಕೆ ಹರಿಪ್ರಸಾದ್, ರಾಜೀವ್ಗೌಡ, ಡಾ. ಎಲ್. ಹನುಮಂತಯ್ಯ, ಉಪೇಂದ್ರ ರೆಡ್ಡಿ, ಜಿ.ಸಿ ಚಂದ್ರಶೇಖರ್, ನಸೀರ್ಅಹ್ಮದ್ ಸೇರಿದಂತೆ ಹಲವು ಸಂಸದರು ಪ್ರತಿಭಟನೆ ನಡೆಸಿದರು. ಮೇಕೆದಾಟು ಯೋಜನೆ ರಾಜ್ಯಕ್ಕೆ  ಬೇಕು ಎಂದು ಆಗ್ರಹ ಮಾಡಿದರು.

ಮೇಕೆದಾಟು ಜಲಾಶಯ ನಿರ್ಮಾಣದಿಂದ ತಮಿಳುನಾಡಿಗೆ ಯಾವುದೇ ತೊಂದರೆಯಾಗುವುದಿಲ್ಲ. ಕಾಲ ಕಾಲಕ್ಕೆ ತಮಿಳುನಾಡಿಗೆ ಬಿಡಬೇಕಾಗಿರುವ ನೀರು ಯಾವುದೇ ಕಾರಣಕ್ಕೂ ತಪ್ಪಿಸುವುದಿಲ್ಲ. ಹಾಗಿದ್ದರೂ ತಮಿಳುನಾಡಿನ ಸಂಸದರು ಹಾಗೂ ಅಲ್ಲಿನ ಸರ್ಕಾರ ವಿನಾಕಾರಣ ಯೋಜನೆಗೆ ಅಡ್ಡಿಪಡಿಸುತ್ತಿರುವುದು ಸರಿಯಲ್ಲ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ರಾಜೀನಾಮೆ ಕೊಡದಿದ್ದರೆ ಸದನ ನಡೆಸಲು ಬಿಡೆವು: ಛಲವಾದಿ ನಾರಾಯಣಸ್ವಾಮಿ

ಮನೆ ಹೊರಗೇ ಗಂಟೆಗಟ್ಟಲೆ ಕಾದು ನಿಂತಿದ್ದ ಅಮ್ಮ, ಮನೆ ಒಳಗಿದ್ದ ಮಗಳು ಪ್ರಿಯಕರನ ಜೊತೆ... Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರೇಟ್ ಫಿಕ್ಸ್ ಆಗದೆ ಡೇಟ್ ಫಿಕ್ಸ್ ಆಗಲಿಲ್ಲ ಎಂಬ ಆರೋಪಕ್ಕೆ ಕಾಂಗ್ರೆಸ್ ನಾಯಕರೇ ಸಾಕ್ಷಿ: ವಿಜಯೇಂದ್ರ

ಪ್ರತಿಭಟನೆ ಏನೋ ಮಾಡ್ತೀರಾ, ರಾಷ್ಟ್ರಧ್ವಜ ಹೇಗೆ ಹಿಡಿಯಬೇಕು ಗೊತ್ತಿಲ್ವಾ: ಮೆಹಬೂಬಾ ಮುಫ್ತಿಗೆ ನೆಟ್ಟಿಗರ ತರಾಟೆ video

ಮುಂದಿನ ಸುದ್ದಿ
Show comments