Webdunia - Bharat's app for daily news and videos

Install App

ಸೌದಿಯಿಂದ ಬಂದ ಕಾಲ್ ಆ ಕುಟುಂಬದವರ ಬಾಳಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ…!

Webdunia
ಭಾನುವಾರ, 30 ಸೆಪ್ಟಂಬರ್ 2018 (19:15 IST)
ಆತ ವೃದ್ಧ ತಂದೆ, ತಾಯಿ ಹಾಗೂ ಪತ್ನಿ, ಮೂವರು ಮಕ್ಕಳಿಗೆ ಆಸರೆಯಾಗಿದ್ದವನು. ಕುಟುಂಬ ನಿರ್ವಹಣೆಗೆಂದು ಸೌದಿ ಅರೇಬಿಯಾಕ್ಕೆ ತೆರಳಿದ್ದ. ಆತ ಪ್ರತಿನಿತ್ಯ ಪತ್ನಿಗೆ ಫೋನ್ ಮಾಡಿ ಮಾತನಾಡುತ್ತಿದ್ದ. ಆದರೆ ಕಳೆದ ನಾಲ್ಕು ದಿನಗಳ ಹಿಂದೆ ಫೋನ್ ಬಾರದ ಪತ್ನಿಗೆ ಬಂದ ಆ ಒಂದು ಕಾಲ್ ಅವರ ಬಾಳಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. 

 ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಸುಂಬಡ ಗ್ರಾಮದ ನಿವಾಸಿಯಾಗಿರುವ ಕವಿತಾ ಪತಿ ಗೊಲ್ಲಾಳಪ್ಪ ಕಳೆದ 20 ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದರಂತೆ. ಪ್ರತಿನಿತ್ಯ ಪತ್ನಿ ಕವಿತಾಗೆ ಫೋನ್ ಮಾಡುತ್ತಿದ್ದ ಗೊಲ್ಲಾಳಪ್ಪ, ಕಳೆದ ನಾಲ್ಕು ದಿನಗಳಿಂದ ಕರೆ ಮಾಡಿರಲಿಲ್ಲವಂತೆ. ಸಂಜೆ 4 ಗಂಟೆಗೆ ದುಬೈನಿಂದ ಕರೆ ಮಾಡಿದ್ದ ವ್ಯಕ್ತಿ ಗೊಲ್ಲಾಳಪ್ಪ 'ಮರ್ ಗಯಾ.. ಮರ್ ಗಯಾ' ಅಂತಾ ಹೇಳಿದ್ದಾರಂತೆ.

ಇನ್ನು ಗೊಲ್ಲಾಳಪ್ಪ ಮೃತದೇಹವನ್ನು ಸ್ವಗ್ರಾಮಕ್ಕೆ ತರಲು ಸೂಕ್ತ ವ್ಯವಸ್ಥೆ ಮಾಡಬೇಕೆಂದು ಕುಟುಂಬಸ್ಥರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ. ಕಲಬುರಗಿ ಅಪರ ಜಿಲ್ಲಾಧಿಕಾರಿ ಭೀಮಾಶಂಕರ್ ತೆಗ್ಗೆಳ್ಳಿಗೆ ಮನವಿ ಸಲ್ಲಿಸಿರುವ ಕುಟುಂಬಸ್ಥರು, 'ಸೌದಿ ಅರೇಬಿಯಾದ ಜಿದ್ದಾ ನಗರದ ಪ್ರಾಣ ಎಂಬ ಕಂಪನಿಯಲ್ಲಿ ಗೊಲ್ಲಾಳಪ್ಪ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ" ಅಂತಾ ಉಲ್ಲೇಖಿಸಿದ್ದಾರೆ. ಗೊಲ್ಲಾಳಪ್ಪ ಮೃತಪಟ್ಟು ಮೂರು ದಿನಗಳಾದರೂ ಗೊಲ್ಲಾಳಪ್ಪ ದುಡಿಯುತ್ತಿದ್ದ ಕಂಪನಿಯ ಮಾಲೀಕರಿಗೆ ಗೊತ್ತಾಗಿಲ್ಲವಂತೆ. ತನ್ನ ಗಂಡ ಹೇಗೇ ಮೃತಪಟ್ಟಿದ್ದಾನೆಂಬುದು ನಿಗೂಢವಾಗಿದೆ. ತನ್ನ ಗಂಡನ ಸಾವಿಗೆ ಏನೆಂಬುದನ್ನು ಪತ್ತೆ ಹಚ್ಚಬೇಕು ಹಾಗೂ ಮೃತದೇಹವನ್ನು ಸ್ವಗ್ರಾಮಕ್ಕೆ ಕಳುಹಿಸಿಕೊಡಬೇಕೆಂದು ಮನವಿ ಮಾಡಲಾಗಿದೆ. ಇನ್ನು ನಾಲ್ಕು ತಿಂಗಳ ಹಿಂದಷ್ಟೇ ಬಂದಿದ್ದ ಮಗ ಗೊಲ್ಲಾಳಪ್ಪ ಮೃತಪಟ್ಟಿದ್ದಾನೆ ಅವನ ಮೃತದೇಹವನ್ನಾದರೂ ತಂದು ಕೊಡಿ ಎಂದು ತಂದೆ ಹಣಮಂತರಾಯ ಕಣ್ಣೀರಿಡುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments