Webdunia - Bharat's app for daily news and videos

Install App

ಕೋವಿಡ್ ಮೂರನೇ ಅಲೆ ಎದುರಿಸಲು ರಾಜ್ಯ ಸಿದ್ಧವಾಗಿದೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

Webdunia
ಸೋಮವಾರ, 17 ಜನವರಿ 2022 (20:42 IST)
ಬೆಂಗಳೂರು: ಕೋವಿಡ್-19 ರ ಮೂರನೇ ಅಲೆ ಎದುರಿಸಲು ರಾಜ್ಯ ಸರ್ಕಾರ ಸಿದ್ಧವಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಭಾನುವಾರ ಹೇಳಿದ್ದಾರೆ.
ಕೋವಿಡ್-19 ವಿರುದ್ಧ ದೇಶವ್ಯಾಪಿ ಲಸಿಕೆ ಅಭಿಯಾನವು ಭಾನುವಾರಕ್ಕೆ ಒಂದು ವರ್ಷವನ್ನು ಪೂರೈಸಿದೆ. ಈ ನಡುವಲ್ಲೇ ನಗರದಲ್ಲಿ ಅಬಲಾಶ್ರಮ ಎಂಬ ಎನ್‌ಜಿಒ ಸಂಸ್ಥೆ ಭಾನುವಾರ ಏರ್ಪಡಿಸಿದ್ದ ಸ್ವಾಸ್ಥ್ಯ ಎಂಬ ಉಚಿತ ಆರೋಗ್ಯ ಸೇವಾ ಶಿಬಿರವನ್ನು ಸಚಿವರು ಉದ್ಘಾಟಿಸಿದರು.
ಈ ವೇಳೆ ಲಸಿಕೆ ಕುರಿತು ಮಾತನಾಡಿರುವ ಸಚಿವರು, ಕರ್ನಾಟಕದಲ್ಲಿ ಈವರೆಗೆ 9 ಕೋಟಿಗೂ ಹೆಚ್ಚು ಲಸಿಕೆಗಳನ್ನು ನೀಡಲಾಗಿದೆ. ಇದರಲ್ಲಿ ಎರಡೂ ಡೋಸ್‌ಗಳನ್ನು ಪಡೆದ 8 ಕೋಟಿಗೂ ಹೆಚ್ಚು ವಯಸ್ಕರು ಮತ್ತು 15 ರಿಂದ 17 ವರ್ಷದೊಳಗಿನ 19 ಲಕ್ಷ ಮಕ್ಕಳು ಒಂದು ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. ಇದಲ್ಲದೆ, ಸುಮಾರು ಮೂರು ಲಕ್ಷ ನಾಗರೀಕರು ತಮ್ಮ ಮುನ್ನೆಚ್ಚರಿಕಾ ಲಸಿಕೆಯನ್ನು ಪಡೆದುಕೊಂಡಿದ್ದಾರೆ.
ಸೋಂಕು ತಗುಲಿದವರಿಗೆ ಪರಿಣಾಮಕಾರಿಯಾಗಿ ಮತ್ತು ತಕ್ಷಣವೇ ಚಿಕಿತ್ಸೆ ನೀಡುವುದನ್ನು ಖಚಿತಪಡಿಸಿಕೊಳ್ಳಲು ತಂತ್ರಜ್ಞಾನ ಮತ್ತು ಡೇಟಾ ಬಳಕೆಯ ಮೂಲಕ ಸಾಂಕ್ರಾಮಿಕ ರೋಗದ 3ನೇ ಅಲೆಯನ್ನು ನಿಯಂತ್ರಿಸಲಾಗುವುದು. 10,000 ಕ್ಕೂ ಹೆಚ್ಚು ವೈದ್ಯರಿಗೆ ಹೋಮ್ ಐಸೋಲೇಶನ್ ಪ್ರಕರಣಗಳನ್ನು ಹೇಗೆ ನಿರ್ವಹಿಸಬೇಕು, ರೋಗಿಗಳಿಗೆ ಯಾವ ರೀತಿ ಸಲಹೆ ನೀಡುವುದು, ಯಾವುದನ್ನು ಮಾಡಬೇಕು, ಮಾಡಬಾರದು ಎಂಬುದರ ಕುರಿತು ಶಿಕ್ಷಣ ನೀಡಲಾಗುತ್ತದೆ. ಈ ಮೂಲಕ ರಾಜ್ಯವು ಮೂರನೇ ಅಲೆಗೆ ಸಿದ್ಧತೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.
ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೂ ಇದೇ ರೀತಿಯ ತರಬೇತಿ ನೀಡಲಾಗುವುದು ಎಂದರು.
ಅಬಲಾಶ್ರಮವು ಮಹಿಳೆಯರಿಗೆ ಸಹಾಯ ಮಾಡುವ ಮತ್ತು ಸಬಲೀಕರಣ ಮಾಡುವ ಗುರಿಯನ್ನು ಹೊಂದಿದೆ. ಉಚಿತ ಆರೋಗ್ಯ ಸೇವಾ ಶಿಬಿರದ ಮೂಲಕ ಅಗತ್ಯವಿರುವವರಿಗೆ ಬಹು-ವಿಶೇಷ ವೈದ್ಯಕೀಯ ಸೇವೆಗಳನ್ನು ಉಚಿತವಾಗಿ ನೀಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments