Webdunia - Bharat's app for daily news and videos

Install App

ಸರ್ಕಾರದ ವಿರುದ್ಧ ಇಂದು ಮತ್ತೆ ರಾಜ್ಯ ಸಾರಿಗೆ ನೌಕರರ ಹೋರಾಟ

Webdunia
ಬುಧವಾರ, 8 ಫೆಬ್ರವರಿ 2023 (13:55 IST)
6 ವರ್ಷ ಕಳೆದರೂ ಸಾರಿಗೆ ನೌಕರರಿಗೆ ವೇತನ ಹೆಚ್ಚಳ ಮಾಡದ ಹಿನ್ನೆಲೆ ಇಂದು ಮತ್ತೆ ಸಾರಿಗೆ ನೌಕರರು ಧರಣಿ ನಡೆಸುತ್ತಿದ್ದಾರೆ.ಕಳೆದ ಒಂದು ವಾರದ ಹಿಂದೆ ಸರ್ಕಾರದ ವೇತನ ಹೆಚ್ಚಿಸಲು ಆಗ್ರಹಿಸಿ ಧರಣಿ ನಡೆಸಿದ್ದರು.ಆದ್ರೂ ಕ್ಯಾರೇ ಅನ್ನದ ಸರ್ಕಾರದ ಧೋರಣೆ  ಖಂಡಿಸಿ ಮತ್ತೆ ಇಂದು ಬೀದಿಗಿಳಿಯಲು ತೀರ್ಮಾನ ಮಾಡಿದ್ದು,ಸಾರಿಗೆ ನೌಕರರಿಂದ ಸರ್ಕಾರದ ಗಮನ ಸೆಳೆಯಲು ಮತ್ತೆ ಬೃಹತ್ ಧರಣಿ ಸತ್ಯಾಗ್ರಹ ಮಾಡ್ತಿದ್ದಾರೆ.
 
ನಾಲ್ಕು ನಿಗಮದ ನೌಕರರಿಂದ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಸತ್ಯಾಗ್ರಹ ನಡೆಯುತ್ತಿದೆ.ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 2021 ರ ಏಪ್ರಿಲ್ ನಲ್ಲಿ 15 ದಿನಗಳ ಕಾಲ ನೌಕರರು ಮುಷ್ಕರ ನಡೆಸಿದ್ದರು .ಆದ್ರೂ ಇಲ್ಲಿಯವರೆಗೆ ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಮೀನಾಮೇಷ ಏಣಿಸಿದೆ.ಹೀಗಾಗಿ ಸಾರಿಗೆ ನಿಗಮಗಳ ನಿರ್ಲಕ್ಷ್ಯ ನಡೆಯಿಂದ ಇಂದು  ಧರಣಿ ಸತ್ಯಾಗ್ರಹ ನಡೆಸಲು ನಿರ್ಧಾರ ಮಾಡಿಕೊಂಡಿದ್ದು,ರಾಜ್ಯ ಸಾರಿಗೆ ನೌಕರರ ಮುಖಂಡ ಅನಂತಸುಬ್ಬರಾವ್ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಸುವ ಮೂಲಕ ಅಸಮಾಧಾನ ಹೊರಹಾಕ್ತಿದ್ದಾರೆ.
 
ಸಾರಿಗೆ ನಿಗಮಗಳ ನಿರ್ಲಕ್ಷ್ಯ ನಡೆಯಿಂದ ಬೇಸತ್ತಿದ್ದು, ಪ್ರತಿ ನಾಲ್ಕು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಮಾಡುತ್ತಿದ್ದ ನಿಗಮಗಳು ಆರು ವರ್ಷ ಕಳೆದರೂ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪ ಇಲ್ಲ.ನಿಯಮಬದ್ಧವಾಗಿ 2020 ಮಾರ್ಚ್ ನಲ್ಲಿ ವೇತನ ಪರಿಷ್ಕರಣೆಯಾಗಬೇಕಿತ್ತು.ನಿಗಮಗಳ ನಿರ್ಧಾರಕ್ಕೆ ಕೆಎಸ್ಆರ್ಟಿಸಿ ಬಿಎಂಟಿಸಿ,ವಾಯುವ್ಯ ಹಾಗೂ ಕಲ್ಯಾಣ ಸಾರಿಗೆ ನಿಗಮಗಳ 1 ಲಕ್ಷ ,30 ನೌಕರರು ಅಸಮಾಧಾನ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments