Webdunia - Bharat's app for daily news and videos

Install App

ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಯ ಮತ ಎಣಿಕೆ ಆರಂಭ

Webdunia
ಬುಧವಾರ, 15 ಡಿಸೆಂಬರ್ 2021 (14:10 IST)
ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘಕ್ಕೆ ಡಿ.12 ರಂದು ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಡಿ.15ರಂದು ಮಂಗಳೂರಿನ ಹಂಪನಕಟ್ಟೆಯ ಎಂಸಿಸಿ ಬ್ಯಾಂಕ್ ನಲ್ಲಿ ಆರಂಭಗೊಂಡಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳನ್ನು ಒಳಗೊಂಡ ದ.ಕ.ಮತ ಕ್ಷೇತ್ರದಲ್ಲಿ ಒಟ್ಟು 6,529 ಮತದಾರರ ಪೈಕಿ 5,427 ಮಂದಿ ಮತ ಚಲಾಯಿಸಿ ಶೇ‌ 83.12 ಮತದಾನವಾಗಿತ್ತು. ಸುಳ್ಯ ಹಾಗು ಕಾಸರಗೋಡು ಜಿಲ್ಲೆ ಸೇರಿದ ಸುಳ್ಯ ಮತಗಟ್ಟೆಯಲ್ಲಿ ಒಟ್ಟು 5125
ಮತದಾರರಲ್ಲಿ ಒಟ್ಟು 4359 ಮಂದಿ ಮತ ಚಲಾಯಿಸಿ ಶೇ.85.05 ಮತದಾನ ದಾಖಲಾಗಿತ್ತು. ದ.ಕ ಮತ ಕ್ಷೇತ್ರದಿಂದ ನಿರ್ದೇಶಕ ಸ್ಥಾನಕ್ಕೆ ಸುಳ್ಯದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಹಾಗೂ ಸಹೋದರ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಪ್ರಧಾನ ಕಾರ್ಯದರ್ಶಿ ಡಾ.ಕೆ.ವಿ.ರೇಣುಕಾಪ್ರಸಾದ್ ಮತ್ತು ಉಡುಪಿಯಲ್ಲಿ ಉದ್ಯಮಿಯಾಗಿರುವ ಸುಳ್ಯ ಮರ್ಕಂಜದವರಾದ ಹೇಮಾನಂದ ಹಲ್ದಡ್ಕ ಅವರು ಅಭ್ಯರ್ಥಿಗಳಾಗಿ ಸ್ಪರ್ಧಾ ಕಣದಲ್ಲಿದ್ದು ಈ ಬಾರಿಯ ಚುನಾವಣೆ ತೀವ್ರ ಕುತೂಹಲ ಕೆರಳಿಸಿದೆ. ಬಿರುಸಿನ ಮತದಾನದ ಬಳಿಕ ಇಂದು ಹೊರ ಬರಲಿರುವ ಫಲಿತಾಂಶದ ಬಗ್ಗೆ ಕುತೂಹಲ ತಾರಕಕ್ಕೇರಿದೆ. ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರ ಬರುವ ಸಾಧ್ಯತೆ ಇದೆ. ಅಭ್ಯರ್ಥಿಗಳು, ಬೂತ್ ಪ್ರತಿನಿಧಿಗಳು ಮತ್ತು ಬೆಂಬಲಿಗರು ಮುಂಜಾನೆಯೇ ಮತ ಎಣಿಕೆ ಕೇಂದ್ರಕ್ಕೆ ತೆರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಕೆ ಶಿವಕುಮಾರ್ ಆರ್ ಎಸ್ಎಸ್ ಹಾಡಿಗೆ ಕೆಎನ್ ರಾಜಣ್ಣ ಗರಂ: ಅವರು ಏನು ಮಾಡಿದ್ರೂ ನಡೀತದೆ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಅಧಿಕ ರಕ್ತದೊತ್ತಡ ನಿಯಂತ್ರಿಸಲು ಇದೊಂದು ಕೆಲಸ ಮಾಡಬೇಕು

ಮತಪರಿಷ್ಕರಣೆ ಯಾಕೆ ಮುಖ್ಯ ಎನ್ನುವುದಕ್ಕೆ ಬಿಹಾರದ ಈ ಘಟನೆಯೇ ಸಾಕ್ಷಿ

ಮುಂದಿನ ಸುದ್ದಿ
Show comments