Webdunia - Bharat's app for daily news and videos

Install App

ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಮೆ ಇದರೆ ತೆರವು

Webdunia
ಬುಧವಾರ, 15 ಡಿಸೆಂಬರ್ 2021 (18:45 IST)
ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಮೆಗಳನ್ನು ಸ್ಥಾಪಿಸಿದರೆ ಅವುಗಳನ್ನು ತೆರವುಗೊಳಿಸಬೇಕೆಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಮೌಖಿಕವಾಗಿ ಸೂಚಿಸಿದೆ.
 
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಿದಲೂರು ಗ್ರಾಮ ಪಂಚಾಯತಿಯ ಬಸ್ ನಿಲ್ದಾಣದಲ್ಲಿ ವಾಲ್ಮೀಕಿ ಪ್ರತಿಮೆ ಸ್ಥಾಪನೆ ಪ್ರಶ್ನಿಸಿ ಕುವೆಂಪು ಒಕ್ಕಲಿಗರ ಸಂಘ ಮತ್ತು ಬಿದಲೂರು ಗ್ರಾಮದ ನಿವಾಸಿಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಈ ಆದೇಶ ನೀಡಿದೆ.ವಿಚಾರಣೆ ವೇಳೆ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದ ಪೀಠ, ಸಾರ್ವಜನಿಕ ಪ್ರದೇಶದಲ್ಲಿ ಪ್ರತಿಮೆ ಸ್ಥಾಪಿಸುವುದಕ್ಕೆ ನಿಬರ್ಂಧವಿದೆ. ಅದು ದೇವರ ಮೂರ್ತಿಯಾಗಲಿ ಅಥವಾ ಮಹಾನ್ ವ್ಯಕ್ತಿಯ ಪ್ರತಿಮೆಯಾಗಲಿ ಸಾರ್ವಜನಿಕ ಸ್ಥಳದಲ್ಲಿ ಸ್ಥಾಪಿಸುವಂತಿಲ್ಲ. ಬೇಕಾದರೆ ಸ್ವಂತ ಜಾಗದಲ್ಲಿ ಪ್ರತಿಮೆ ಸ್ಥಾಪಿಸಿಕೊಳ್ಳಲಿ, ಆರಾಧಿಸಲಿ. ಅದಕ್ಕೆ ನ್ಯಾಯಾಲಯದ ಆಕ್ಷೇಪವಿಲ್ಲ ಎಂದಿತು.
 
ಅಲ್ಲದೆ, ಪ್ರಕರಣದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅನಧಿಕೃತವಾಗಿ ಪ್ರತಿಮೆ ಸ್ಥಾಪಿಸಲಾಗಿದೆ ಎಂದು ಹೇಳುತ್ತಿದ್ದರೂ ತೆರವುಗೊಳಿಸದೆ ಸರಕಾರ ಏಕೆ ಸುಮ್ಮನಿದೆ. ಸಾರ್ವಜನಿಕ ಸ್ಥಳದಲ್ಲಿ ಪ್ರತಿಮೆ ಸ್ಥಾಪನೆಯಿಂದ ಜನ ಮತ್ತು ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತದೆ. ಇಂತಹ ಪ್ರಕರಣಗಳಿಗೆ ಅಂತ್ಯ ಕಾಣಿಸಬೇಕಿದೆ. ಸರಕಾರಿ ಸ್ಥಳದಲ್ಲಿ ಪ್ರತಿಮೆಗಳಿದ್ದರೆ ಮುಲಾಜಿಲ್ಲದೆ ತೆರವುಗೊಳಿಸಬೇಕೆಂದು ಮೌಖಿಕವಾಗಿ ಸೂಚಿಸಿ ವಿಚಾರಣೆ ಮುಂದೂಡಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಸಿ ವೇಣುಗೋಪಾಲ್ ಇದ್ದ ಏರ್ ಇಂಡಿಯಾ ವಿಮಾನ ದುರಂತದಿಂದ ಸ್ವಲ್ಪದರಲ್ಲೇ ಪಾರು

ಪ್ರಧಾನಿ ಮೋದಿ ಜೊತೆ ಗುಸು ಗುಸು ಮಾತನಾಡಿದ್ದೇನೆಂದು ಬಹಿರಂಗಪಡಿಸಿದ ಡಿಕೆ ಶಿವಕುಮಾರ್

Karnataka Rains: ಈ ವಾರ ಮಳೆ ಬಗ್ಗೆ ಇಲ್ಲಿದೆ ಮಹತ್ವದ ಅಪ್ ಡೇಟ್

ಆರ್ಥಿಕತೆಯಲ್ಲಿ 10 ವರ್ಷಗಳ ಹಿಂದೆ 10ನೇ ಸ್ಥಾನದಲ್ಲಿದ್ದ ಭಾರತ 5ನೇ ಸ್ಥಾನಕ್ಕೇರಿದೆ: ಮೋದಿ ಗುಣಗಾನ

ಮೇಕ್ ಇನ್ ಇಂಡಿಯ ತಾಕತ್ತಿನಲ್ಲಿ ಕನ್ನಡಿಗರ ಕೊಡುಗೆ ಅಪಾರ: ನರೇಂದ್ರ ಮೋದಿ

ಮುಂದಿನ ಸುದ್ದಿ
Show comments