Webdunia - Bharat's app for daily news and videos

Install App

ಏಕತಾ ಪ್ರತಿಮೆ ಆಯ್ತು, ಇದೀಗ ಕೆಆರ್ ಎಸ್ ನಲ್ಲಿ ತಲೆಯೆತ್ತಲಿದೆ ಕಾವೇರಿ ಪ್ರತಿಮೆ

Webdunia
ಶುಕ್ರವಾರ, 16 ನವೆಂಬರ್ 2018 (08:37 IST)
ಬೆಂಗಳೂರು: ಗುಜರಾತ್ ನ ನರ್ಮದಾ ತೀರದಲ್ಲಿ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಭಾರತದ ಉಕ್ಕಿನ ಮನುಷ್ಯ ಎಂದೇ ಜನಜನಿತರಾಗಿರುವ ಸರ್ದಾರ್ ವಲ್ಲಭಾಯ್ ಪಟೇಲ್ ಅವರ ಏಕತಾ ಪ್ರತಿಮೆ ಲೋಕಾರ್ಪಣೆಗೊಳಿಸಿದ್ದರು.

ವಿಶ್ವದ ಅತ್ಯಂತ ಎತ್ತರದ ಪ್ರತಿಮೆ ಎನ್ನುವ ಗರಿಮೆಗೆ ಇದು ಪಾತ್ರವಾಗಿತ್ತು. ಅದರ ಬೆನ್ನಲ್ಲೇ ಇದೀಗ ಕರ್ನಾಟಕದಲ್ಲೂ ಅಂತಹದ್ದೇ ಒಂದು ಯೋಜನೆಗೆ ರಾಜ್ಯದ ಸಮ್ಮಿಶ್ರ ಸರ್ಕಾರ ಮುಂದಾಗಿದೆ.

ಕೆಆರ್ ಎಸ್ ಬಳಿ 125 ಅಡಿ ಎತ್ತರದ ಕಾವೇರಿ ಪ್ರತಿಮೆ ನಿರ್ಮಿಸಲು ಸರ್ಕಾರ ಮುಂದಾಗಿದೆ. ಇದರ ಯೋಜನಾ ವೆಚ್ಚ ಸುಮಾರು 1200 ಕೋಟಿ ರೂ. ಆಗಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ. ಪ್ರತಿಮೆ ಜತೆಗೆ ಪ್ರವಾಸೋದ್ಯಮಕ್ಕೆ ಬೇಕಾದ ಎಲ್ಲಾ ಆಕರ್ಷಣೀಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ಯೋಜನೆ ರೂಪಿಸಿದೆ.

ಆದರೆ ಇದರ ಯೋಜನಾ ವೆಚ್ಚವನ್ನು ಸರ್ಕಾರದ ಬೊಕ್ಕಸದಿಂದ ಬಳಸದೇ ಖಾಸಗಿ ಹೂಡಿಕೆದಾರರಿಗೆ ಬಿಟ್ಟುಬಿಡಲು ಸರ್ಕಾರ ಚಿಂತನೆ ನಡೆಸಿದೆ. ಸಿಎಂ ಕುಮಾರಸ್ವಾಮಿ ಮತ್ತು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಇಂತಹದ್ದೊಂದು ತೀರ್ಮಾನ ಕೈಗೊಳ್ಳಲಾಗಿದೆ. ಇದೀಗ ಹೂಡಿಕೆದಾರರು ಮುಂದೆ ಬಂದಲ್ಲಿ ಪ್ರತಿಮೆ ಕೆಲಸವೂ ಶುರುವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

ಮುಂದಿನ ಸುದ್ದಿ
Show comments