ಟೆಕ್ಕಿಗೆ ಇರಿದು ಹಣ ದೋಚಿದ; ಸಿನಿಮಾ ಸ್ಟೈಲ್ ನಲ್ಲಿ ಪೊಲೀಸರ ಗುಂಡೇಟು ತಿಂದ

Webdunia
ಮಂಗಳವಾರ, 4 ಜೂನ್ 2019 (16:32 IST)
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಟೆಕ್ಕಿಗೆ ಚಾಕು ತೋರಿಸಿ ಅಡ್ಡಗಟ್ಟಿ ಎಟಿಂಎಂಗೆ ಕರೆದು ಕೊಂಡು ಹೋಗಿ ಹಣ ಡ್ರಾ ಮಾಡಿ ಕೊಡುವಂತೆ ಹೇಳಿದ್ದ ಭೂಪನೊಬ್ಬನನ್ನು ಸಿನಿಮೀಯ ರೀತಿಯಲ್ಲಿ ಬಂಧನ ಮಾಡಲಾಗಿದೆ.

ಟೆಕ್ಕಿಗೆ ಚಾಕುವಿನಿಂದ ಸುಮಾರು 10 ಕಡೆ ಇರಿದು ಹಲ್ಲೆ ನಡೆಸಿದ್ದ ಆರೋಪಿಯ ಮೇಲೆ ಅತ್ತಿಬೆಲೆ ಠಾಣೆಯ ಸಿಪಿಐ ಗಿರೀಶ್ ಶೂಟ್ ಔಟ್ ನಡೆಸಿರುವ ಘಟನೆ ನಡೆದಿದೆ.  ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಅತ್ತಿಬೆಲೆ ಪೊಲೀಸರಿಗೆ ರಾತ್ರಿ ಹಲ್ಲೆಯ ಖಚಿತ ಮಾಹಿತಿ ಮೇರೆಗೆ ರೌಡಿಶೀಟರ್ ಶಶಾಂಕ್(23) ನನ್ನು ಬಂಧಿಸಲು ತೆರಳಿದ್ದು ಈ ವೇಳೆ ಶಶಾಂಕ್ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ.

ಈ ವೇಳೆ ಪೊಲೀಸರು ಆರೋಪಿಯನ್ನು ಶರಣಾಗುವಂತೆ ತಿಳಿಸಿದ್ರೂ ಪುಂಡಾಟ ಮೆರೆದ ಆರೋಪಿಗೆ 2 ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಕೊನೆಗೆ ಶಶಾಂಕ್ ಬಾಲಗಾಲಿಗೆ ಮತ್ತೊಂದು ಗುಂಡು ಹಾರಿಸಿ ಬಂಧಿಸಿದ್ದಾರೆ. ಇನ್ನು ಆರೋಪಿ ಶಾಶಂಕ್ ಬನ್ನೇರುಘಟ್ಟ, ಹುಳಿಮಾವು, ಕೋಣನಕುಂಟೆ ಸೇರಿದಂತೆ ಬೇರೆ ಬೇರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ,  ರಾಬರಿ ಸೇರಿದಂತೆ ಹಲವು ಪ್ರಕರಣಗಳ ಪ್ರಮುಖ ಆರೋಪಿಯಾಗಿದ್ದ.

ಕಾರ್ಯಾಚರಣೆಯಲ್ಲಿ ಅತ್ತಿಬೆಲೆ ಸಿಪಿಐ ಬಾಲಾಜಿ, ಎಸ್.ಐ. ಮುರಳೀಧರ ಹಾಗೂ ತಂಡ ಭಾಗವಹಿಸಿದ್ದು ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಆರೋಪಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಅಡಿಷನಲ್ ಎಸ್ಪಿ ಸುಜಿತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆ ಜೊತೆ ಸೋನಿಯಾ ಗಾಂಧಿ ಮೀಟಿಂಗ್: ಮೇಡಂ ಕೈಯಲ್ಲಿ ಎಲ್ಲಾ ಇದೆ

ಸಿಎಂ ಜೊತೆ ಭಿನ್ನಾಭಿಪ್ರಾಯ ಇಲ್ಲ ಎಂದ ಡಿಕೆ ಶಿವಕುಮಾರ್: ಆದರೆ ಕತೆ ಬೇರೆಯೇ ಇದೆ..

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ: ವಿಪಕ್ಷಗಳಿಗೆ ಸಿಕ್ಕಿದೆ ಎರಡು ಅಸ್ತ್ರ

Karnataka Weather: ಬೆಂಗಳೂರು ಚಳಿಗೆ ಗಡ, ಗಡ: ಈ ವಾರದ ಹವಾಮಾನ ತಪ್ಪದೇ ಗಮನಿಸಿ

ಸಿಎಂ ಕುರ್ಚಿಗಾಗಿ ಗುದ್ದಾಟದ ನಡುವೆ ಆ ಸ್ಥಾನ ಬೇಕಾಗಿಲ್ಲವೆಂದ ಸಂತೋಷ್ ಲಾಡ್‌

ಮುಂದಿನ ಸುದ್ದಿ
Show comments