Webdunia - Bharat's app for daily news and videos

Install App

ಟೆಕ್ಕಿಗೆ ಇರಿದು ಹಣ ದೋಚಿದ; ಸಿನಿಮಾ ಸ್ಟೈಲ್ ನಲ್ಲಿ ಪೊಲೀಸರ ಗುಂಡೇಟು ತಿಂದ

Webdunia
ಮಂಗಳವಾರ, 4 ಜೂನ್ 2019 (16:32 IST)
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಟೆಕ್ಕಿಗೆ ಚಾಕು ತೋರಿಸಿ ಅಡ್ಡಗಟ್ಟಿ ಎಟಿಂಎಂಗೆ ಕರೆದು ಕೊಂಡು ಹೋಗಿ ಹಣ ಡ್ರಾ ಮಾಡಿ ಕೊಡುವಂತೆ ಹೇಳಿದ್ದ ಭೂಪನೊಬ್ಬನನ್ನು ಸಿನಿಮೀಯ ರೀತಿಯಲ್ಲಿ ಬಂಧನ ಮಾಡಲಾಗಿದೆ.

ಟೆಕ್ಕಿಗೆ ಚಾಕುವಿನಿಂದ ಸುಮಾರು 10 ಕಡೆ ಇರಿದು ಹಲ್ಲೆ ನಡೆಸಿದ್ದ ಆರೋಪಿಯ ಮೇಲೆ ಅತ್ತಿಬೆಲೆ ಠಾಣೆಯ ಸಿಪಿಐ ಗಿರೀಶ್ ಶೂಟ್ ಔಟ್ ನಡೆಸಿರುವ ಘಟನೆ ನಡೆದಿದೆ.  ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಅತ್ತಿಬೆಲೆ ಪೊಲೀಸರಿಗೆ ರಾತ್ರಿ ಹಲ್ಲೆಯ ಖಚಿತ ಮಾಹಿತಿ ಮೇರೆಗೆ ರೌಡಿಶೀಟರ್ ಶಶಾಂಕ್(23) ನನ್ನು ಬಂಧಿಸಲು ತೆರಳಿದ್ದು ಈ ವೇಳೆ ಶಶಾಂಕ್ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ.

ಈ ವೇಳೆ ಪೊಲೀಸರು ಆರೋಪಿಯನ್ನು ಶರಣಾಗುವಂತೆ ತಿಳಿಸಿದ್ರೂ ಪುಂಡಾಟ ಮೆರೆದ ಆರೋಪಿಗೆ 2 ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಕೊನೆಗೆ ಶಶಾಂಕ್ ಬಾಲಗಾಲಿಗೆ ಮತ್ತೊಂದು ಗುಂಡು ಹಾರಿಸಿ ಬಂಧಿಸಿದ್ದಾರೆ. ಇನ್ನು ಆರೋಪಿ ಶಾಶಂಕ್ ಬನ್ನೇರುಘಟ್ಟ, ಹುಳಿಮಾವು, ಕೋಣನಕುಂಟೆ ಸೇರಿದಂತೆ ಬೇರೆ ಬೇರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ,  ರಾಬರಿ ಸೇರಿದಂತೆ ಹಲವು ಪ್ರಕರಣಗಳ ಪ್ರಮುಖ ಆರೋಪಿಯಾಗಿದ್ದ.

ಕಾರ್ಯಾಚರಣೆಯಲ್ಲಿ ಅತ್ತಿಬೆಲೆ ಸಿಪಿಐ ಬಾಲಾಜಿ, ಎಸ್.ಐ. ಮುರಳೀಧರ ಹಾಗೂ ತಂಡ ಭಾಗವಹಿಸಿದ್ದು ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಆರೋಪಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಅಡಿಷನಲ್ ಎಸ್ಪಿ ಸುಜಿತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments