ಹೊಟ್ಟೆಪಾಡಿಗಾಗಿ ದೇವರ ಮುಕುಟ ಕಳ್ಳತನ..!

Webdunia
ಶುಕ್ರವಾರ, 7 ಜುಲೈ 2023 (18:31 IST)
ಜೂನ್ 28 ರ ರಾತ್ರಿ‌ 9.10 ರ ಸಮಯ.ವಿವಿ ಪುರಂ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ನಂಜಪ್ಪ ಸರ್ಕಲ್ ನಲ್ಲಿರುವ ಕನ್ಯಕಾಪರಮೇಶ್ವರಿ‌ ದೇವಸ್ಥಾನ. ಈ ದೇವಸ್ಥಾನಕ್ಕೆ ಭಕ್ತನ ಸೋಗಿನಲ್ಲಿ ಬಂದಿದ್ದ ಆಸಾಮಿ ರವಿ ನಾಯ್ಡು. ಒಂದೂವರೆ ಕೆಜಿ‌ ತೂಕದ ದೇವರ ಮುಕುಟವನ್ನ ಎಗರಿಸಿ ಎಸ್ಕೇಪ್ ಆಗಿದ್ದ. ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದ ವಿವಿ ಪುರಂ ಪೊಲೀಸರು 100 ಸಿಸಿಟಿವಿ ಪರಿಶೀಲನೆ ನಡೆಸಿ  ಆರೋಪಿ ರವಿ ನಾಯ್ಡು ನನ್ನ ಬಂಧಿಸಿದ್ದಾರೆ.. ವಿಪರ್ಯಾಸ ಅಂದ್ರೆ ಇದೇ ರವಿನಾಯ್ಡು 2000 ದಿಂದ 2006 ರ ವರೆಗೆ ಸೈಕಲ್ ನಲ್ಲೆ ವಿಶ್ವಾದ್ಯಂತ ಸುತ್ತಾಡಿ ಏಡ್ಸ್ ಖಾಯಿಲೆ ಬಗ್ಗೆ ಜಾಗೃತಿ ಮೂಡಿಸಿದ್ದವನು.

ರವಿ ನಾಯ್ಡು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರಿಗೆ ಆತನ ಸ್ಥಿತಿ ಕಂಡು ಅಯ್ಯೋ ಅನಿಸಿದೆ.. ಸೈಕಲ್ ನಲ್ಲಿ ದೇಶ ವಿದೇಶ ಸುತ್ತಿದ ರವಿ ನಾಯ್ಡುಗೆ ಮಹಾರಾಷ್ಟ್ರದ ಬಾಳಾ ಠಾಕ್ರೆ ಬೈಕ್ ಒಂದನ್ನ ಗಿಫ್ಟ್ ಮಾಡಿದ್ರಂತೆ.. ಹೀಗೆ ಏಡ್ಸ್ ಬಗ್ಗೆ ಜಾಗೃತಿ ಮೂಡಿಸುತ್ಗಾ ಸುತ್ತಾಡುತ್ತಿದ್ದವನಿಗೆ ಊಟಕ್ಕು ಪರದಾಡುವಂತಹ ಸ್ಥಿತಿ ಉಂಟಾಗಿಬಿಟ್ಟಿತ್ತು. ಈತನ ನೆರವಿಗೂ ಯಾರೊಬ್ಬರು ನಿಲ್ಲಲಿಲ್ಲ. ಹಾಗಾಗಿ ಚಿಂದಿ ಆಯುತ್ತಾ ಅದರಿಂದ ಬರುವ ಹಣದಲ್ಲಿ ಹೊಟ್ಟೆ ತುಂಬಿಸಿಕೊಳ್ತಿದ್ದ. ಹೀಗಿದ್ದವನು ಕಳ್ಳತನದ ಹಾದಿ ಹಿಡಿದು ಅಂದರ್ ಆಗಿದ್ದಾನೆ. ಸದ್ಯ ಬಂಧಿತ ರವಿ ನಾಯ್ಡು ನಿಂದ‌ ಒಂದೂವರೆ ಕೆಜಿ ತೂಕದ ಬೆಳ್ಳಿ ದೇವರ ಮುಕುಟ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸ್ತಿದ್ದಾರೆ.ಸದ್ಯ ಆರೋಪಿ ರವಿ ನಾಯ್ಡು ಜೈಲು ಪಾಲಾಗಿದ್ದು ಆತನ ಬಿಡುಗಡೆ ಬಳಿಕ ವಿವಿ ಪುರಂ ಪೊಲೀಸರು ಪೊಲೀಸ್ ಠಾಣೆಯಲ್ಲೇ ಇರಿಸಿಕೊಂಡು ಊಟ , ವಸತಿ ನೀಡಲು ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments