Webdunia - Bharat's app for daily news and videos

Install App

ಸ್ಟೀಲ್ ಬ್ರಿಡ್ಜ್ ಯೋಜನೆ ರದ್ದು: ಬಿಜೆಪಿ ಹೋರಾಟಕ್ಕೆ ಜಯ ಎಂದ ಶೆಟ್ಟರ್

Webdunia
ಗುರುವಾರ, 2 ಮಾರ್ಚ್ 2017 (15:15 IST)
ಸ್ಟೀಲ್ ಬ್ರಿಡ್ಜ್ ನಿರ್ಮಾಣ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ರದ್ದುಗೊಳಿಸುವಂತೆ ಗ್ರೀನ್ ಸಿಗ್ನಲ್ ನೀಡಿರುವುದು ಬಿಜೆಪಿ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
 
ಸ್ಟೀಲ್ ಬ್ರಿಡ್ಜ್ ನಿರ್ಮಾಣದಿಂದ ಪರಿಸರಕ್ಕೆ ಧಕ್ಕೆಯಾಗುವುದಲ್ಲದೇ, ಹೆಚ್ಚು ಹಣ ವೆಚ್ಚವಾಗುವಂತಹದು. ಆದ್ದರಿಂದ ಅನೇಕ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಿದ್ದವು ಎಂದು ತಿಳಿಸಿದ್ದಾರೆ.
 
ಆರಂಭದಿಂದಲೂ ಬಿಜೆಪಿ ಸ್ಟೀಲ್ ಬ್ರಿಡ್ಜ್ ನಿರ್ಮಾಣವನ್ನು ವಿರೋಧಿಸಿದೆ. ಆದರೆ, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಹಠಮಾರಿ ಧೋರಣೆ ತಳೆದು ನಿರ್ಮಾಣಕ್ಕೆ ಮುಂದಾಗಿತ್ತು ಎಂದು ಅಸಮಾದಾನ ವ್ಯಕ್ತಪಡಿಸಿದರು.
 
ಸ್ಟೀಲ್ ಬ್ರಿಡ್ಜ್ ಯೋಜನೆ ರದ್ದುಗೊಳಿಸಿದ್ದರಿಂದ ಬಿಜೆಪಿ ಸುಮ್ಮನಾಗುವುದಿಲ್ಲ. ಯೋಜನೆ ಆರಂಭಕ್ಕೂ ಮುನ್ನ ಕಿಕ್ ಬ್ಯಾಕ್ ಹಣವನ್ನು ಯಾರು ಪಡೆದಿದ್ದರು. ಪಡೆದ ಹಣವೆಷ್ಟು ಎನ್ನುವ ಬಗ್ಗೆ ಕೆಲವೇ ದಿನಗಳಲ್ಲಿ ಸಂಪೂರ್ಣ ವರದಿ ಬಹಿರಂಗಪಡಿಸಲಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments