Select Your Language

Notifications

webdunia
webdunia
webdunia
webdunia

ಸ್ಟೀಲ್ ಬ್ರಿಡ್ಜ್‌ ರದ್ದತಿಗೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್

ಸ್ಟೀಲ್ ಬ್ರಿಡ್ಜ್‌ ರದ್ದತಿಗೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್
ಬೆಂಗಳೂರು , ಗುರುವಾರ, 2 ಮಾರ್ಚ್ 2017 (15:06 IST)
ಸ್ಟೀಲ್ ಬ್ರಿಡ್ಜ್ ನಿರ್ಮಾಣ ಯೋಜನೆಯನ್ನು ರದ್ದುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ.
 
ಸಿಎಂ ಸಿದ್ದರಾಮಯ್ಯ, ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಅವರಿಗೆ ದೂರವಾಣಿ ಕರೆ ಮಾಡಿ ಯೋಜನೆಯನ್ನು ರದ್ದುಗೊಳಿಸುವಂತೆ ಆದೇಶ ನೀಡಿದ್ದಾರೆ ಎನ್ನಲಾಗಿದೆ.
 
ಸಿಎಂ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಚಿವ ಜಾರ್ಜ್, ಸರಕಾರದ ಪರವಾಗಿ ಅಧಿಕೃತ ಘೋಷಣೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಬೆಂಗಳೂರಿನ ಶಾಸಕರಿಗೆ, ಜನರಿಗೆ ಸ್ಟೀಲ್ ಬ್ರಿಡ್ಜ್ ಬೇಡವೆಂದ ಮೇಲೆ ನಮಗ್ಯಾಕೆ ಸ್ಟೀಲ್ ಬ್ರಿಡ್ಜ್ ಬೇಕು. ಆದ್ದರಿಂದ, ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ಕೈಬಿಡಲಾಗಿದೆ ಎಂದು ತಿಳಿಸಿದ್ದಾರೆ.
    
ಸ್ಟೀಲ್ ಬ್ರಿಡ್ಜ್ ಯೋಜನೆಯಲ್ಲಿ ಸಿಎಂ ಕುಟುಂಬ 65 ಕೋಟಿ ರೂ. ಕಿಕ್‌ಬ್ಯಾಕ್ ಪಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ವಿಪಕ್ಷಗಳು ಕಾಂಗ್ರೆಸ್‌ನ್ನು ಭ್ರಷ್ಟಾಚಾರದ ಸ್ಮಾರಕ ಎಂದು ಬಿಂಬಿಸುತ್ತಿವೆ: ದಿನೇಶ್ ಗುಂಡೂರಾವ್