ಕದ್ದ ಬೈಕ್ ಸಂಬಂಧಿಕರಿಗೆ ಗಿಫ್ಟ್

Webdunia
ಭಾನುವಾರ, 23 ಜನವರಿ 2022 (17:04 IST)
ಕದ್ದ ಬೈಕ್ ಗಳನ್ನೇ ಸಂಬಂಧಿಕರಿಗೆ ಗಿಫ್ಟ್ ಆಗಿ ಕೊಡುತ್ತಿದ್ದ ಖತರ್ನಾಕ್ ಖದೀಮನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಭರತ್ ಬಂಧಿತ ಆರೋಪಿ ಆಗಿದ್ದು, ರಾಜಾಜಿನಗರದ ನಿವಾಸಿ ಎಂದು ಹೇಳಲಾಗಿದೆ. ನಗರದ ವಿವಿಧೆಡೆ ಓಡಾಡಿ ಮನೆ ಮುಂದೆ ನಿಂತಿರುವ ವಾಹನಗಳನ್ನು ಗುರುತಿಸುತ್ತಿದ್ದ.
ವಾಹನಗಳ ನಂಬರ್‌ ಅನ್ನು ತನ್ನ ಮೊಬೈಲ್‌ನಲ್ಲಿ ನೋಂದಾಯಿಸಿಕೊಂಡು ಬೆಂಗಳೂರು ಟ್ರಾಫಿಕ್‌ ಪೊಲೀಸ್‌ ಆಯಪ್‌ ಮೂಲಕ ವಾಹನದ ವಿರುದ್ಧ ಸಂಚಾರಿ ನಿಯಮ ಉಲ್ಲಂಘನೆ ದಂಡ ಬಾಕಿ ಇದೆಯೇ ಎಂದು ಪರಿಶೀಲಿಸುತ್ತಿದ್ದ. ಒಂದು ವೇಳೆ ದಂಡ ವಿಧಿಸಿದ್ದರೆ ಅಂತಹ ವಾಹನಗಳನ್ನು ಕಳವು ಮಾಡುತ್ತಿರಲಿಲ್ಲ. ಯಾವುದೇ ಪ್ರಕರಣಗಳಿಲ್ಲದ ವಾಹನಗಳನ್ನು ಕದಿಯುತ್ತಿದ್ದ. ಕದ್ದ ನಂತರ ಬೈಕ್‌ ಮಾರಿದರೆ ಕಳ್ಳತನ ಮಾಡಿರುವುದು ತಿಳಿಯಬಹುದು ಎಂದು, ಸಂಬಂಧಿಕರಿಗೆ ಉಚಿತವಾಗಿ ನೀಡುತ್ತಿದ್ದ ಎಂಬುದು ವಿಚಾರಣೆಯಲ್ಲಿ ಗೊತ್ತಾಗಿದೆ.ಈ ಹಿನ್ನೆಲೆ ಆರೋಪಿಯನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದು, ಹೆಚ್ಚಿನ ತನಿಖೆಗೆ ಮುಂದಾಗಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments