Webdunia - Bharat's app for daily news and videos

Install App

ಪ್ರದೀಪ್ ಈಶ್ವರ್ ಮೇಲೆ ಕಲ್ಲು ತೂರಾಟ: ಸಿಸಿಟಿವಿ ಸೆನ್ಸಾರ್ ಆನ್ ಆಗ್ತಿದ್ದರೆ ಪರಾರಿ

Krishnaveni K
ಬುಧವಾರ, 5 ಜೂನ್ 2024 (10:09 IST)
Photo Credit: Facebook
ಚಿಕ್ಕಬಳ್ಳಾಪುರ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ಗೆದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದ ಪ್ರದೀಪ್ ಈಶ್ವರ್ ಗೆ ಈಗ ತಮ್ಮ ಹೇಳಿಕೆಯೇ ಸಂಕಷ್ಟ ತಂದೊಡ್ಡಿದೆ.

ಪ್ರದೀಪ್ ಈಶ್ವರ್ ಈ ಹಿಂದೆ  ವಿಧಾನಸಭೆ ಚುನಾವಣೆಯಲ್ಲಿ ಸುಧಾಕರ್ ರನ್ನು ಸೋಲಿಸಿದ್ದರು. ಇಬ್ಬರ ನಡುವೆ ರಾಜಕೀಯ ವೈರುಧ್ಯಗಳಿದ್ದೇ ಇದೆ. ಇದೇ ಕಾರಣಕ್ಕೆ ಚಿಕ್ಕಬಳ್ಳಾಪುರದಲ್ಲಿ ಈ ಬಾರಿ ಸುಧಾಕರ್ ಒಂದೇ ಒಂದು ವೋಟ್ ನಿಂದ ಗೆದ್ದರೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ, ರಾಜಕೀಯ ಸನ್ಯಾಸ ತೆಗೆದುಕೊಳ್ಳುತ್ತೇನೆ ಎಂದು ಪ್ರದೀಪ್ ಶಪಥ ಮಾಡಿದ್ದರು.

ನಿನ್ನೆ ಸುಧಾಕರ್ ಗೆಲ್ಲುತ್ತಿದ್ದಂತೇ ಪ್ರದೀಪ್ ಹಳೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಟ್ರೋಲ್ ಆಗಿದ್ದವು. ಇದೆಲ್ಲಾ ಬೆಳವಣಿಗೆ ನಡುವೆ ನಿನ್ನೆ ರಾತ್ರಿ ಪ್ರದೀಪ್ ನಿವಾಸಕ್ಕೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.

ರಾತ್ರಿ ಸುಮಾರು 10.15 ರ ಹೊತ್ತಿಗೆ ಈ ಘಟನೆ ನಡೆದಿದೆ. ನಾಲ್ಕೈದು ಹುಡುಗರ ತಂಡ ಪ್ರದೀಪ್ ಮನೆಗೆ ಕಲ್ಲೆಸೆದಿದ್ದಾರೆ. ಇದರಿಂದ ಕಿಟಿಕಿ ಗಾಜುಗಳಿಗೆ ಹಾನಿಯಾಗಿದೆ. ಕಲ್ಲು ಎಸೆಯುತ್ತಿದ್ದಾಗ ಸಿಸಿಟಿವಿ ಸೆನ್ಸರ್ ಆನ್ ಆಗಿದ್ದು ಕಿಡಿಗೇಡಿಗಳು ಓಡಿ ಹೋಗಿದ್ದಾರೆ ಎಂದು ಪ್ರದೀಪ್ ಮನೆಯ ಸಿಬ್ಬಂದಿಗಳು ಮಾಹಿತಿ ನೀಡಿದ್ದಾರೆ. ಪೊಲೀಸರು ಈಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments