Webdunia - Bharat's app for daily news and videos

Install App

ವಕ್ಫ್‌ ಆಸ್ತಿ ವಿಚಾರಕ್ಕೆ 2 ಕೋಮಿನ ಮಧ್ಯೆ ಕಲ್ಲು ತೂರಾಟ: 32ಮಂದಿ ಅರೆಸ್ಟ್‌

sampriya
ಗುರುವಾರ, 31 ಅಕ್ಟೋಬರ್ 2024 (11:27 IST)
photo credit X
ಹಾವೇರಿ: ವಕ್ಫ್‌ ಆಸ್ತಿ ವಿಚಾರಕ್ಕೆ ಸಂಬಂಧಪಟ್ಟಂತೆ ಮನೆ ಖಾಲಿ ಮಾಡಿಸುತ್ತಾರೆಂಬ ಮಾಹಿತಿ ಹರಿದಾಡುತ್ತಿದ್ದ ಹಾಗೇ ಸವಣೂರು ತಾಲ್ಲೂಕಿನ ಕಡಕೋಳದಲ್ಲಿ ಎರಡು ಕೋಮಿನ ಮಧ್ಯೆ ಬುಧವಾರ ಗಲಾಟೆ ನಡೆದು, ಕೆಲಹೊತ್ತು ಪರಿಸ್ಥಿತಿ ಬಿಗಡಾಯಿಸಿತ್ತು.

ಒಂದು ಕೋಮಿನ ಮುಖಂಡರ ಮನೆಗಳ ಮೇಲೆ ಮತ್ತೊಂದು ಕೋಮಿನ ಜನರು ಕಲ್ಲು ತೂರಾಟ ನಡೆಸಿದ್ದಾರೆ. ಗಲಾಟೆ ಮಾಹಿತಿ ಪಡೆದ ಪೊಲೀಸರು ಕಡಕೋಳ ಗ್ರಾಮಕ್ಕೆ ಹೋಗಿ ಜನರನ್ನು ಚದುರಿಸಿದ್ದು, ಬಾಲಕರು ಸೇರಿದಂತೆ 32 ಮಂದಿಯನ್ನು ಬಂಧಿಸಲಾಗಿದೆ ಎಂದು ಎಸ್‌ಪಿ ಅಂಶುಕುಮಾರ್‌ ತಿಳಿಸಿದರು.

ಉದ್ರಿಕ್ತರ ಗುಂಪು ಮುಸ್ಲಿಂ ಮುಖಂಡ ಮೊಹಮ್ಮದ್ ರಫಿ ಎಂಬುವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದೆ. ಅಲ್ಲದೆ ಮನೆ ಮುಂದಿದ್ದ ಬೈಕ್ ಅನ್ನು ಜಖಂ ಮಾಡಲಾಗಿದೆ. ಮತ್ತೆ ಅಹಿತಕರ ಘಟನೆ ನಡೆಯದಂತೆ ಗ್ರಾಮಸ್ಥರ ಮನವೊಲಿಕೆಗೆ ಯತ್ನಿಸಿದರು. ಗಲಾಟೆಗೆ ಕಾರಣರಾದವರನ್ನು ಬಂಧಿಸಲು ಮುಂದಾದ ಪೊಲೀಸರು, ಗಲಾಟೆಗೆ ಪ್ರಚೋದನೆ ನೀಡಿದರನ್ನೂ ಪತ್ತೆ ಮಾಡಲು ಮುಂದಾಗಿದ್ದಾರೆ.

ಗ್ರಾಮದಲ್ಲಿದ್ದ ಗರಡಿ ಮನೆ ಹಾಗೂ ಹಲವು ಮನೆಗಳ ಖಾತೆ ಬದಲಾವಣೆ ಮಾಡಿ ವಕ್ಫ್‌ ಆಸ್ತಿ ಎಂಬುದಾಗಿ ಬಗ್ಗೆ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments