Publish Date: Fri, 28 Apr 2023 (08:36 IST)
Updated Date: Fri, 28 Apr 2023 (10:18 IST)
ಮೈಸೂರು : ಸಿದ್ದರಾಮನಹುಂಡಿಯಲ್ಲಿ ಸೋಮಣ್ಣ ಪ್ರಚಾರದ ನಡೆಸುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಪ್ರಚಾರ ರಥದ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಲ್ಲು ತೂರಾಟ ನಡೆಸಿರುವ ಆರೋಪ ಕೇಳಿ ಬಂದಿದೆ.
ಸಿದ್ದರಾಮಯ್ಯ ಅವರ ಅಣ್ಣನ ಮನೆ ಮುಂದೆ ಪ್ರಚಾರ ಮಾಡುವಾಗ ಈ ಘಟನೆ ನಡೆದಿದೆ. ಘಟನೆ ವೇಳೆ ಬಿಜೆಪಿ ಕಾರ್ಯಕರ್ತ ನಾಗೇಶ್ ಮೇಲೆ ಹಲ್ಲೆ ನಡೆದಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾನೆ.