Webdunia - Bharat's app for daily news and videos

Install App

ಎರಡನೆಯ ದಿನಕ್ಕೂ ಮುಂದುವರೆದ ಸಾರಿಗೆ ನೌಕರರ ಮುಷ್ಕರ!

Webdunia
ಮಂಗಳವಾರ, 26 ಜುಲೈ 2016 (10:40 IST)
ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ನೌಕರರು ಕೈಗೊಂಡಿರುವ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಎರಡನೆಯ ದಿನಕ್ಕೂ ಮುಂದುವರೆದಿದೆ. 
 
ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಚಾಮರಾಜನಗರದ ಡಿಪೋದಿಂದ ಹೊರಡಬೇಕಿದ್ದ 490 ಬಸ್‌ಗಳು ನಿಂತಲ್ಲೇ ನಿಂತಿರುವುದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಮುಂಚಾಗ್ರತಾ ಕ್ರಮವಾಗಿ ಇಂದು ಬಹುತೇಕ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
 
ಮುಷ್ಕರವನ್ನೇ ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್‌ ಹಾಗೂ ಆಟೋ ಚಾಲಕರು ಪ್ರಯಾಣಿಕರಿಂದ ಹೆಚ್ಚು ಹಣ ಸುಲಿಗೆ ಮಾಡುತ್ತಿವೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. 
 
ಖಾಸಗಿ ಬಸ್‌ ಹಾಗೂ ಆಟೋ ಚಾಲಕರು ಪ್ರಯಾಣಿಕರಿಂದ ಹೆಚ್ಚು ಹಣ ಸುಲಿಗೆ ಮಾಡುತ್ತಿದ್ದು, ಈ ಕುರಿತು ಸಾರ್ವಜನಿಕರು ದೂರು ನೀಡಿದರೆ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments