Webdunia - Bharat's app for daily news and videos

Install App

ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್‌ನ ಐವನ್ ಡಿಸೋಜಾ ಮನೆಗೆ ಕಲ್ಲು ತೂರಾಟ

Sampriya
ಗುರುವಾರ, 22 ಆಗಸ್ಟ್ 2024 (15:38 IST)
Photo Courtesy X
ಮಂಗಳೂರು: ಪ್ರತಿಭಟನೆ  ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ಮಂಗಳೂರಿನ ವೆಲೆನ್ಸಿಯಾದ ಮನೆಯ ಮೇಲೆ ರಾತ್ರಿ ಕಲ್ಲು ತೂರಾಟ ನಡೆದಿದೆ.

ಹೆಲ್ಮೆಟ್ ಹಾಕಿಕೊಂಡು ಬೈಕ್‌ನಲ್ಲಿ ಬಂದಿರುವ ದುಷ್ಕರ್ಮಿಗಳು ಮನೆ ಮೇಲೆ ಕಲ್ಲು ತೂರಾಟ ನಡೆಸಿ, ಎಸ್ಕೇಪ್ ಆಗಿದ್ದಾರೆ. ಇದಾದ ನಂತರ 2 ನಿಮಿಷ ಬಿಟ್ಟು ಮತ್ತೆ ಬೈಕ್ ನಲ್ಲಿ ಬಂದು ಕಲ್ಲು ತೂರಾಟ ಮಾಡಿದ್ದಾರೆ. ಇದರಿಂದ ಐವನ್ ಡಿಸೋಜಾ ಅವರ ಮನೆಯ ಕಿಟಕಿ ಗಾಜುಗಳು ಹಾನಿಯಾಗಿವೆ.

ಹೊರಗೆ ಹೋಗಿದ್ದ ಐವನ್ ಡಿಸೋಜಾ ಅವರ ಪತ್ನಿ ಕವಿತಾ ಡಿಸೋಜಾ ಅವರು ಮನೆ ಬಳಿ ಕಾರು ಪಾರ್ಕ್ ಮಾಡಿ ಒಳಗೆ ಹೋದ ಐದು ನಿಮಿಷದಲ್ಲೇ ಕಲ್ಲು ತೂರಾಟ ನಡೆದಿದೆ. ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ‌ ಹಿನ್ನಲೆ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಪಾಂಡೇಶ್ವರ ಠಾಣಾ ಪೊಲೀಸರು ಭೇಟಿ ನೀಡಿ ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸಿದ್ದಾರೆ.

ಸದ್ಯ ಐವನ್ ಡಿಸೋಜಾ ಅವರ ಮನೆಗೆ ಪೊಲೀಸ್ ಭದ್ರತೆ ನೀಡಲಾಗಿದೆ. ಸಿಸಿ ಕ್ಯಾಮೆರಾದಲ್ಲಿ ಆರೋಪಿಗಳ ಚಹರೆ ಪತ್ತೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

ಮುಂದಿನ ಸುದ್ದಿ
Show comments