Webdunia - Bharat's app for daily news and videos

Install App

ಕಳ್ಳಿಯರಿಗೆ ಹಿಗ್ಗಾಮುಗ್ಗಾ ಥಳಿತ!

Webdunia
ಸೋಮವಾರ, 18 ಫೆಬ್ರವರಿ 2019 (16:41 IST)
ಚಾಲಾಕಿ ಕಳ್ಳಿಯರು ಮಾಡಬಾರದ ಕೆಲಸ ಮಾಡಿ ಸಿಕ್ಕಿಬಿದ್ದು ಜನರಿಂದ ಹಿಗ್ಗಾಮುಗ್ಗಾ ಥಳಿಸಿಕೊಂಡ ಘಟನೆ ನಡೆದಿದೆ.

ಬಸ್ ಪ್ರಯಾಣಿಕರ ಸೋಗಿನಲ್ಲಿ ಸರಗಳ್ಳತನ ಮಾಡುತ್ತಿದ್ದ ಕಳ್ಳಿಯರಿಗೆ ಬಸ್ ಪ್ರಯಾಣಿಕರೇ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಪಕ್ಷಿಕೆರೆ ಎಂಬಲ್ಲಿ ನಡೆದಿದೆ. ಮಂಗಳೂರು ಜಿಲ್ಲೆಯ ಪಕ್ಷಿಕೆರೆ ಗ್ರಾಮದ ಕೆಮ್ರಾಲ್ ನಿವಾಸಿ ರತ್ನಾ ಎಂಬ ಮಹಿಳೆ ಬಸ್ನಲ್ಲಿ ಸಂಚರಿಸಿ ಪಕ್ಷಿಕೆರೆ ಚರ್ಚ್ ಬಳಿ ಇಳಿಯಲು ಮುಂದಾದಾಗ ಸರಗಳ್ಳಿಯರು ಕುತ್ತಿಗೆಯಿಂದ ಸರ ಸೆಳೆದು ಪರಾರಿಯಾಗಲು ಯತ್ನಿಸಿದ್ದಾರೆ.

ವೇಳೆ ರತ್ನಾ ಬೊಬ್ಬೆ ಹಾಕಿದ್ದು ಸ್ಥಳೀಯ ರಿಕ್ಷಾ ಚಾಲಕರು ಪರಾರಿಯಾಗುತ್ತಿದ್ದ ಸರಗಳ್ಳಿಯರ ತಂಡದಲ್ಲಿದ್ದ ನಾಲ್ವರನ್ನು ಹಿಡಿದಿದ್ದಾರೆ. ಒಟ್ಟು ಸೇರಿದ ಸಾರ್ವಜನಿಕರು ಮಹಿಳೆಯರ ಮೇಲೆ ಹಿಗ್ಗಾಮುಗ್ಗಾ ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಹಿಳೆಯರು ಕನ್ನಡ, ಹಿಂದಿ ಭಾಷೆಯಲ್ಲಿ ಮಾತಾಡುತ್ತಿದ್ದು ಹೊರರಾಜ್ಯದವರು ಎಂದು ತಿಳಿದುಬಂದಿದೆ. ಇವರು ಭಾನುವಾರ ಬಸ್ನಲ್ಲಿ ರಶ್ ಹೆಚ್ಚಿರುವ ವೇಳೆ ವಿವಿಧ ಕಡೆಗಳಲ್ಲಿ ಬಸ್ಗಳಲ್ಲಿ ಸಂಚರಿಸಿ ಕಾರ್ಯಾಚರಣೆ ನಡೆಸುತ್ತಿದ್ದರು ಎನ್ನಲಾಗಿದೆ. ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments