Webdunia - Bharat's app for daily news and videos

Install App

ರಾಜಧಾನಿಯಲ್ಲಿ ಹೆಚ್ಚಿದ ಬೀದಿ ನಾಯಿಗಳ ಹಾವಳಿ ....!!!

Webdunia
ಬುಧವಾರ, 27 ಜುಲೈ 2022 (17:58 IST)
ಬೆಂಗಳೂರಿನಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಕಂಡ ಕಂಡವರ ಮೇಲೆ ದಾಳಿ ಮಾಡುತ್ತಿವೆ. ಒಂದೇ ತಿಂಗಳಲ್ಲಿ ಸುಮಾರು 2 ಸಾವಿರದಷ್ಟು ಜನ ನಾಯಿ ಕಡಿತಕ್ಕೆ ಒಳಗಾಗಿದ್ದಾರೆ. ಕೆಲವರಲ್ಲಿ ರೇಬಿಸ್ ಲಕ್ಷಣಗಳು ಕಂಡು ಬಂದಿವೆ.
 
ಸಿಟಿಯಲ್ಲಿ ಒಂದು ದಿನಕ್ಕೆ 80ಕ್ಕೂ ಹೆಚ್ಚು ಜನರು ನಾಯಿ ಕಡಿತಕ್ಕೆ ಒಳಗಾಗುತ್ತಿದ್ದಾರೆ. ಇದರಿಂದ ರಾತ್ರಿ ಹೊತ್ತು ರಸ್ತೆಯಲ್ಲಿ ಮಕ್ಕಳು ಓಡಾಡಲು ಭಯ ಪಡುತ್ತಿದ್ದಾರೆ. ಮನೆಯ ಮುಂದೆ ಮಕ್ಕಳು ಆಟ ಆಡುವಾಗ ಅಟ್ಯಾಕ್ ಮಾಡುತ್ತಿವೆ. ಸಿಟಿಯಲ್ಲಿ 3 ಲಕ್ಷಕ್ಕೂ ಹೆಚ್ಚು ಬೀದಿ ನಾಯಿಗಳಿವೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
 
2020 ರಿಂದ ಇಲ್ಲಿಯವರೆಗೆ 52 ಸಾವಿರಕ್ಕೂ ಹೆಚ್ಚು ಜನ ಶ್ವಾನ ಕಡಿತಕ್ಕೆ ಒಳಗಾಗಿದ್ದಾರೆ. 2020 ರ ಫೆಬ್ರವರಿಯಲ್ಲಿ ಓರ್ವ ಮಹಿಳೆ ನಾಯಿ ಕಡಿತದಿಂದ ಮೃತಪಟ್ಟಿದ್ದಾರೆ. 31 ವರ್ಷದ ಮಹಿಳೆಗೆ, ನಾಯಿ ಕಚ್ಚಿದ್ದರೂ ಚಿಕಿತ್ಸೆ ಪಡೆದಿರಲಿಲ್ಲ. ನಿಮ್ಹಾನ್ಸ್ ಪ್ರಯೋಗಾಲ ಯದಲ್ಲಿ ಪರೀಕ್ಷೆ ನಡೆಸಿದಾಗ ರೇಬಿಸ್ ಇರುವುದು ಖಚಿತವಾಗಿತ್ತು. ಎರಡು ವರ್ಷದಲ್ಲಿ ಬೆಂಗಳೂರಿನ 52 ಸಾವಿರದ 262 ಮಂದಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ತಿಂಗಳಿಗೆ ಸರಾಸರಿ 2,177 ಮಂದಿ ಬೀದಿ ನಾಯಿಗಳಿಂದ ಕಡಿತಕ್ಕೊಳಗಾಗಿದ್ದಾರೆ. ಸಂತಾನ ಹರಣ ಚಿಕಿತ್ಸೆಗೆ ಪಾಲಿಕೆ ಮುಂದಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments