ರಾಜಧಾನಿಯಲ್ಲಿ ಹೆಚ್ಚಿದ ಬೀದಿ ನಾಯಿಗಳ ಹಾವಳಿ ....!!!

Webdunia
ಬುಧವಾರ, 27 ಜುಲೈ 2022 (17:58 IST)
ಬೆಂಗಳೂರಿನಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಕಂಡ ಕಂಡವರ ಮೇಲೆ ದಾಳಿ ಮಾಡುತ್ತಿವೆ. ಒಂದೇ ತಿಂಗಳಲ್ಲಿ ಸುಮಾರು 2 ಸಾವಿರದಷ್ಟು ಜನ ನಾಯಿ ಕಡಿತಕ್ಕೆ ಒಳಗಾಗಿದ್ದಾರೆ. ಕೆಲವರಲ್ಲಿ ರೇಬಿಸ್ ಲಕ್ಷಣಗಳು ಕಂಡು ಬಂದಿವೆ.
 
ಸಿಟಿಯಲ್ಲಿ ಒಂದು ದಿನಕ್ಕೆ 80ಕ್ಕೂ ಹೆಚ್ಚು ಜನರು ನಾಯಿ ಕಡಿತಕ್ಕೆ ಒಳಗಾಗುತ್ತಿದ್ದಾರೆ. ಇದರಿಂದ ರಾತ್ರಿ ಹೊತ್ತು ರಸ್ತೆಯಲ್ಲಿ ಮಕ್ಕಳು ಓಡಾಡಲು ಭಯ ಪಡುತ್ತಿದ್ದಾರೆ. ಮನೆಯ ಮುಂದೆ ಮಕ್ಕಳು ಆಟ ಆಡುವಾಗ ಅಟ್ಯಾಕ್ ಮಾಡುತ್ತಿವೆ. ಸಿಟಿಯಲ್ಲಿ 3 ಲಕ್ಷಕ್ಕೂ ಹೆಚ್ಚು ಬೀದಿ ನಾಯಿಗಳಿವೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
 
2020 ರಿಂದ ಇಲ್ಲಿಯವರೆಗೆ 52 ಸಾವಿರಕ್ಕೂ ಹೆಚ್ಚು ಜನ ಶ್ವಾನ ಕಡಿತಕ್ಕೆ ಒಳಗಾಗಿದ್ದಾರೆ. 2020 ರ ಫೆಬ್ರವರಿಯಲ್ಲಿ ಓರ್ವ ಮಹಿಳೆ ನಾಯಿ ಕಡಿತದಿಂದ ಮೃತಪಟ್ಟಿದ್ದಾರೆ. 31 ವರ್ಷದ ಮಹಿಳೆಗೆ, ನಾಯಿ ಕಚ್ಚಿದ್ದರೂ ಚಿಕಿತ್ಸೆ ಪಡೆದಿರಲಿಲ್ಲ. ನಿಮ್ಹಾನ್ಸ್ ಪ್ರಯೋಗಾಲ ಯದಲ್ಲಿ ಪರೀಕ್ಷೆ ನಡೆಸಿದಾಗ ರೇಬಿಸ್ ಇರುವುದು ಖಚಿತವಾಗಿತ್ತು. ಎರಡು ವರ್ಷದಲ್ಲಿ ಬೆಂಗಳೂರಿನ 52 ಸಾವಿರದ 262 ಮಂದಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ತಿಂಗಳಿಗೆ ಸರಾಸರಿ 2,177 ಮಂದಿ ಬೀದಿ ನಾಯಿಗಳಿಂದ ಕಡಿತಕ್ಕೊಳಗಾಗಿದ್ದಾರೆ. ಸಂತಾನ ಹರಣ ಚಿಕಿತ್ಸೆಗೆ ಪಾಲಿಕೆ ಮುಂದಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈತರ ಪ್ರತಿಭಟನೆ ನಡುವೆ ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಎಲ್ಲಿ ಹೋದ್ರು

Karnataka Weather: ಈ ವಾರಂತ್ಯಕ್ಕೆ ಮಳೆಯ ಸೂಚನೆಯಿದೆಯಾ ಇಲ್ಲಿದೆ ವಿವರ

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣಕ್ಕೆ ಪ್ಲಾನ್ ಮಾಡಿದ್ದವರಿಗೆ ಬಿಗ್ ಶಾಕ್‌

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಮುಂದಿನ ಸುದ್ದಿ
Show comments