Webdunia - Bharat's app for daily news and videos

Install App

ಹೆದ್ದಾರಿಗಳಲ್ಲಿ ಅತೀ ವೇಗ ಚಾಲನೆ ಮಾಡಿದರೋ ಇನ್ಮುಂದೆ ಈ ಕಠಿಣ ಶಿಕ್ಷೆ ಗ್ಯಾರಂಟಿ

Krishnaveni K
ಶನಿವಾರ, 27 ಜುಲೈ 2024 (16:08 IST)
ಬೆಂಗಳೂರು: ಹೆದ್ದಾರಿಗಳಲ್ಲಿ ಅತಿಯಾದ ವೇಗದಿಂದ ಗಾಡಿ ಓಡಿಸುವವರು ಇನ್ನು ಮುಂದೆ ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. ಅಂತಹವರ ವಿರುದ್ಧ ಎಫ್ ಐಆರ್ ದಾಖಲಿಸಲು ಸಂಚಾರ ಪೊಲೀಸರು ನಿರ್ಧರಿಸಿದ್ದಾರೆ.

ಹೆದ್ದಾರಿಗಳಲ್ಲಿ ಅತೀ ವೇಗ ಮತ್ತು ರಾಶ್ ಡ್ರೈವಿಂಗ್ ಮಾಡಿ ಅಪಘಾತಗಳಿಗೆ ಕಾರಣವಾಗುವ ಅನೇಕ ಘಟನೆಗಳನ್ನು ನೋಡಿದ್ದೇವೆ. ಇನ್ನು ಮುಂದೆ ಆ ರೀತಿ ಡ್ರೈವಿಂಗ್ ಮಾಡುವವರ ವಿರುದ್ಧ ಬರೀ ದಂಡ ಮಾತ್ರವಲ್ಲ, ಎಫ್ಐಆರ್ ದಾಖಲಾಗಲಿದೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಇಂತಹ ಅನೇಕ ಪ್ರಕರಣಗಳು ವರದಿಯಾದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.

ಓವರ್ ಸ್ಪೀಡ್ ಗೆ ಬ್ರೇಕ್ ಹಾಕಲು ಎಡಿಜಿಪಿ ಅಲೋಕ್ ಕುಮಾರ್ ಇಂತಹದ್ದೊಂದು ನಿಯಮ ಜಾರಿಗೆ ತಂದಿದ್ದಾರೆ. ಹೆದ್ದಾರಿಗಳಲ್ಲಿ 130 ಕಿ.ಮೀ. ಗೂ ಅಧಿಕ ವೇಗದಲ್ಲಿ ವಾಹನ ಚಲಾಯಿಸಿದರೆ ಸಿಸಿಟಿವಿಯಲ್ಲಿ ದಾಖಲಾಗಲಿದೆ. ಅಂತಹ ವಾಹನ ಮಾಲಿಕರಿಗೆ ದಂಡದ ಜೊತೆಗೆ ಎಫ್ ಐಆರ್ ದಾಖಲಾಗಲಿದೆ.

ಈಗಾಗಲೇ ಒನ್ ವೇನಲ್ಲಿ ವಾಹನ ನುಗ್ಗಿಸುವುದು, ಕಣ್ಣಿಗೆ ರಾಚುವಂತಹ ಹೆಡ್ ಲೈಟ್ ಹಾಕುವುದು ಇತ್ಯಾದಿ ಕೆಲಸಗಳನ್ನು ಮಾಡುವ ವಾಹನ ಚಾಲಕರನ್ನು ಗುರುತಿಸಿ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಅದರ ಜೊತೆಗೆ ಈಗ ವೇಗದ ಚಾಲನೆಗೂ ಬ್ರೇಕ್ ಹಾಕಲು ಕ್ರಮ ಕೈಗೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

ಮುಂದಿನ ಸುದ್ದಿ
Show comments