Webdunia - Bharat's app for daily news and videos

Install App

ರಾಜಕಾಲುವೆಯಲ್ಲಿ ಒತುವರಿ ಮಾಡಿದರೆ ಕಠಿಣ ಕ್ರಮ

Webdunia
ಶುಕ್ರವಾರ, 26 ನವೆಂಬರ್ 2021 (18:13 IST)
ರಾಜಾಕಾಲುವೆ ಒತ್ತುವರಿಯಿಂದ ಮನೆಗಳಿಗೆ ಮಳೆ ನೀರು ನುಗ್ಗಿ ನಗರದಲ್ಲಿ ಭಾರೀ ಅನಾಹುತ ಸೃಷ್ಟಿಯಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ರಾಜಾಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಖಡಕ್ ಸೂಚನೆ ನೀಡಿದೆ.‌ ಈಗ ರಾಜಕಾಲುವೆ ಒತ್ತುವರಿ ಮಾಡಿ ಮನೆ ಕಟ್ಟಿದವರಿಗೆ ಢವಢವ ಶುರುವಾಗಿದೆ.ರಾಜಾಧಾನಿ ಬೆಂಗಳೂರಿನಲ್ಲಿ ಕೆರೆ ಒತ್ತುವರಿ, ರಾಜಾಕಾಲುವೆ ಒತ್ತುವರಿ ಸಮಸ್ಯೆ ಇವತ್ತು ನಿನ್ನೆಯದಲ್ಲ. ಸಮಸ್ಯೆ ಕಣ್ಣಿಗೆ ಕಂಡಿದ್ರೂ ಸರ್ಕಾರಗಳು ಕುರುಡಾಗಿತ್ತು. ಕಳೆದ ಭಾನುವಾರ ಸುರಿದ ಧಾರಾಕಾರ ಮಳೆಯಿಂದ ಇಡೀ ಬೆಂಗಳೂರು ಉತ್ತರವೇ ತತ್ತರಿಸಿ ಹೋಗಿತ್ತು. ಕೆಲವು ಕಡೆ ಕೆರೆ ನೀರು ಮನೆ, ಅಪಾರ್ಟ್ಮೆಂಟ್, ಅಂಗಡಿ – ಮುಂಗಟ್ಟುಗಳಿಗೆ ನುಗ್ಗಿದ್ರೆ, ಇನ್ನು ಕೆಲವು ಕಡೆ ಕೆರೆ ಕೋಡಿ ತುಂಬಿ ಅದ್ವಾನವಾಗಿತ್ತು. ಬೆಂಗಳೂರು ಉತ್ತರ ಭಾಗದ ಜನರು ಅಕ್ಷರಶಃ ನರಕಯಾತನೆ ಅನುಭವಿಸಿದ್ದು, ಸರ್ಕಾರ ಮತ್ತು ಬಿಬಿಎಂಪಿ ಗೆ ಹಿಡಿಶಾಪ ಹಾಕಿದ್ರು. ಇದ್ರ ಬೆನ್ನಲ್ಲೆ ಎಚ್ಚೆತ್ತ ಸರ್ಕಾರ ಈಗ ಒತ್ತುವರಿಯಾದ ರಾಜಾಕಾಲುವೆ ತೆರವುಗೊಳಿಸಲು ಸೂಚನೆ ನೀಡಿದೆ.
 
ಸರ್ಕಾರದ ಒತ್ತುವರಿ ಲೀಸ್ಟ್ ನಲ್ಲಿ ನಗರದ ಒಟ್ಟು 356 ವಾಸದ ಮನೆಗಳಿದ್ದು, 959 ಕಡೆಗಳಲ್ಲಿ ಖಾಲಿಜಾಗಕ್ಕೆ ಒತ್ತುವರಿಗೊಳಿಸಿ ಬೇಲಿ ಹಾಕಿರೋದು ಗೊತ್ತಾಗಿದೆ. ಇನ್ನು ಒತ್ತುವರಿ ಜಾಗದಲ್ಲಿ 35 ವಾಣಿಜ್ಯ ಕೈಗಾರಿಕಾ ಕಟ್ಟಡಗಳು ನಿರ್ಮಾಣವಾಗಿದ್ದು, 244 ಕಡೆಗಳಲ್ಲಿ ರಾಜಕಾಲುವೆ ಜಾಗ ಒತ್ತುವರಿ ಮಾಡಿ ಕಟ್ಟಡ ಕಟ್ಟಲಾಗಿದೆ ಅಂತಾ ಗುರುತಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಮುಂದಿನ ಸುದ್ದಿ
Show comments