ಜ.13ಕ್ಕೆ ಕೆ-ಸೆಟ್ ಪರೀಕ್ಷೆಗೆ ಕಟ್ಟು ನಿಟ್ಟಿ‌ನ ನಿಗಾ

geetha
ಗುರುವಾರ, 11 ಜನವರಿ 2024 (20:03 IST)
ಬೆಂಗಳೂರು:ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಶನಿವಾರ (ಜ.13) ನಡೆಯಲಿದ್ದು, ಇದಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಗಳನ್ನು‌ ಮಾಡಿಕೊಂಡಿದೆ. ವಿವಿಧ ರೀತಿಯ 41 ವಿಷಯಗಳಿಗೆ (Subjects) ಪರೀಕ್ಷೆ ನಡೆಯುತ್ತಿದ್ದು ಒಟ್ಟು 1,17,302 ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
 
ಬೆಂಗಳೂರು ನಗರ ಸೇರಿದಂತೆ ಧಾರವಾಡ, ಹಾವೇರಿ, ಬಳ್ಳಾರಿ, ದಾವಣಗೆರೆ, ತುಮಕೂರು, ಮೈಸೂರು, ಮಂಡ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆದಿದ್ದು ಕಟ್ಟುನಿಟ್ಟಿನ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ.ಶನಿವಾರ‌ ಬೆಳಿಗ್ಗೆ 10ರಿಂದ 11 ಗಂಟೆವರೆಗೆ ಎಲ್ಲ ವಿಷಯಗಳ ಅಭ್ಯರ್ಥಿಗಳಿಗೆ ಸಾಮಾನ್ಯ ಪರೀಕ್ಷೆ (ಪೇಪರ್-1) ಇರುತ್ತದೆ. ಅದಾದ ನಂತರ ಅದೇ ಪರೀಕ್ಷಾ ಕೇಂದ್ರಗಳಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಪರೀಕ್ಷೆ (ಪೇಪರ್-2) ನಡೆಯಲಿದೆ. ಅದು ಮಧ್ಯಾಹ್ನ 12ರಿಂದ 2.00ರವರೆಗೆ ಇರುತ್ತದೆ. ಒಮ್ಮೆ ಪರೀಕ್ಷಾ ಕೇಂದ್ರದೊಳಗೆ‌ ಅಭ್ಯರ್ಥಿಗಳು ಹೋದ‌ ಮೇಲೆ ಎರಡೂ ಪತ್ರಿಕೆಗಳ ಪರೀಕ್ಷೆ ಮುಗಿದ ನಂತರವೇ ಹೊರಹೋಗಲು‌ ಬಿಡುವುದು ಎಂದು ಅವರು ವಿವರಿಸಿದ್ದಾರೆ.
 
ಕಟ್ಟುನಿಟ್ಟಿನ ತಪಾಸಣೆ ಇರುವ ಕಾರಣ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಎರಡು ಗಂಟೆ‌‌ ಮೊದಲೇ ಬರಬೇಕು ಎಂದು ಅವರು ಸೂಚಿಸಿದ್ದಾರೆ.ಪರೀಕ್ಷೆ ನಡೆಯುವ 41 ವಿಷಯಗಳಲ್ಲಿ ವಾಣಿಜ್ಯ ಶಾಸ್ತ್ರದ ಪರೀಕ್ಷೆಯನ್ನು ಅತಿ ಹೆಚ್ವು ಅಂದರೆ 16,000 ಮಂದಿ ತೆಗೆದುಕೊಂಡಿದ್ದಾರೆ. ಕನ್ನಡ ವಿಷಯವನ್ನು 11 ಸಾವಿರ ಮಂದಿ ತೆಗೆದುಕೊಂಡಿದ್ದಾರೆ. ಅತಿ ಕಡಿಮೆ ಅಂದರೆ 25 ಮಂದಿ ಭಾಷಾಶಾಸ್ತ್ರದ ವಿಷಯದಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.ಪರೀಕ್ಷೆ ಬರೆಯುವ ಒಟ್ಟು ಅಭ್ಯರ್ಥಿಗಳ ಪೈಕಿ‌ ಅತಿ ಹೆಚ್ಚು ಅಂಕ ಪಡೆದ ಶೇ 6ರಷ್ಟು ಮಂದಿ ಅಂತಿಮವಾಗಿ ಕೆಸೆಟ್ ಪರೀಕ್ಷೆ ಯಲ್ಲಿ ಅರ್ಹತೆ ಪಡೆಯಲಿದ್ದಾರೆ. ಇದರಲ್ಲಿ ರೋಸ್ಟರ್ ನಿಯಮಗಳನ್ನು ಪಾಲಿಸಲಾಗುತ್ತದೆ ಎಂದು ಅವರು ತಿಳಿಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ದರೋಡೆ ಪ್ರಕರಣ: ಪೊಲೀಸರ ಕಣ್ತಪ್ಪಿಸಲು ಕಳ್ಳರ ಖತರ್ನಾಕ್ ಪ್ಲ್ಯಾನ್ ಬಹಿರಂಗ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಡಿಕೆ ಶಿವಕುಮಾರ್ ಬೆಂಬಲಿಗರನ್ನು ತಡೆಯಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments