Select Your Language

Notifications

webdunia
webdunia
webdunia
webdunia

ಯಡಿಯೂರಪ್ಪ, ಈಶ್ವರಪ್ಪ ಬಣದ ಕಾರ್ಯಕರ್ತರ ನಡುವೆ ಮಾರಾಮಾರಿ

ಯಡಿಯೂರಪ್ಪ, ಈಶ್ವರಪ್ಪ ಬಣದ ಕಾರ್ಯಕರ್ತರ ನಡುವೆ ಮಾರಾಮಾರಿ
ಶಿವಮೊಗ್ಗ , ಮಂಗಳವಾರ, 17 ಜನವರಿ 2017 (16:17 IST)
ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಬಣದ ಕಾರ್ಯಕರ್ತರ ಮಧ್ಯ ಮತಿನ ಚಕಮಕಿ ನಡೆದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಸೋಮವಾರ ಪತ್ರಿಕಾಗೋಷ್ಠಿ ಬಹಿಷ್ಕರಿಸಿ ಹೊರ ನಡೆದಿದ್ದ ಈಶ್ವರಪ್ಪ ಬಣದ ಪ್ರಮುಖರಾದ ಗಿರೀಶ್ ಪಟೇಲ್, ಎಸ್.ದತ್ತಾತ್ರಿ. ಎಸ್.ಜ್ಞಾನೇಶ್ವರ್, ಎಸ್.ಎಸ್.ಚನ್ನಬಸಪ್ಪ ಸೇರಿದಂತೆ ಮುಂತಾದವರು ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿದ್ದು, ಅವರ ವಿರುದ್ಧ ಶಿಸ್ತು ಕ್ರ ಜರುಗಿಸುವಂತೆ ಕೆ.ಪಿ.ಪುರುಷೋತಮ್ ನೇತೃತ್ವದಲ್ಲಿ ಬಿ.ಎಸ್.ಯಡಿಯೂರಪ್ಪ ಬಣದ ಕಾರ್ಯಕರ್ತರು ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಗೌಡರಿಗೆ ಮನವಿ ಸಲ್ಲಿಸಲು ತೆರಳಿದಾಗ ಈ ಘಟನೆ ನಡೆದಿದೆ. 
 
ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಗೌಡರಿಗೆ ಮನವಿ ಸಲ್ಲಿಸಿ ಕಚೇರಿಯಿಂದ ಘೋಷಣೆ ಕೂಗುತ್ತಾ ಹೊರ ಬರುವಾಗ ಕೆ.ಎಸ್.ಈಶ್ವರಪ್ಪ ಬೆಂಬಲಿಗರೊಂದಿಗೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದಾಗ ಉಭಯ ಬಣಗಳ ಕಾರ್ಯಕರ್ತರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದಾರೆ ಎನ್ನಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಂಪುಟ ವಿಸ್ತರಣೆ, ಪುನರ್‌ ರಚನೆ ಸದ್ಯಕ್ಕಿಲ್ಲ: ಸಿಎಂ ಸಿದ್ದರಾಮಯ್ಯ