Select Your Language

Notifications

webdunia
webdunia
webdunia
webdunia

ಸೇನೆ ವಿರುದ್ಧ ಘೋಷಣೆ: ಎಫ್‌ಐಆರ್ ಹಾಕಿದ ಮೇಲೆ ಸೆಕ್ಷನ್‌ನಲ್ಲಿ ಗೊಂದಲ ಸೃಷ್ಟಿಯಾಗಿದೆ

ಕನ್ನಡ ಪ್ರಾದೇಶಿಕ
ಬೆಂಗಳೂರು , ಶುಕ್ರವಾರ, 19 ಆಗಸ್ಟ್ 2016 (11:43 IST)
ಬೆಂಗಳೂರಿನಲ್ಲಿ ಭಾರತೀಯ ಸೇನೆ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ಹಾಕಿದ ಮೇಲೆ ಸೆಕ್ಷನ್‌ನಲ್ಲಿ ಸ್ವಲ್ಪ ಗೊಂದಲ ಸೃಷ್ಟಿಯಾಗಿದೆ ಎಂದು ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಸೇನೆ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶಾವಳಿ ತರಿಸಿಕೊಂಡು ದೇಶ ವಿರೋಧಿ ಘೋಷಣೆ ಕೂಗಿದ್ದಾರ ಅಥವಾ ಇಲ್ಲ ಎನ್ನುವ ಕುರಿತು ವಿಚಾರಣೆ ನಡೆಸಲಾಗುತ್ತದೆ ಎಂದು ತಿಳಿಸಿದರು.
 
ತುಮಕೂರಿನ ಎಸ್‌ಎಸ್‌ಐಟಿಯಲ್ಲಿ ದೇಶದ್ರೋಹಿ ಘೋಷಣೆ ಪ್ರಕರಣ.....
 
ತುಮಕೂರಿನ ಎಸ್‌ಎಸ್‌ಐಟಿಯಲ್ಲಿ ಯಾವುದೇ ದೇಶದ್ರೋಹಿ ಘೋಷಣೆಗಳು ಕೇಳಿ ಬಂದಿಲ್ಲ. ಈ ಕುರಿತು ಆರೋಪಿತ ವಿದ್ಯಾರ್ಥಿ ಸಹ ಘೋಷಣೆ ಕೂಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆರೋಪಿ ವಿದ್ಯಾರ್ಥಿಯ ವಿರುದ್ಧ 153 ಸೆಕ್ಸೆನ್‌ ಅಡಿಯಲ್ಲಿ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದರು.
 
ಎಸ್‌ಐ ಮೇಲೆ ಶಾಸಕ ಮಲ್ಲಿಕಾರ್ಜುನ್ ಖೂಬಾ ದರ್ಪ......
 
ಎಸ್‌ಐ ಮೇಲೆ ಶಾಸಕ ಮಲ್ಲಿಕಾರ್ಜುನ್ ಖೂಬಾ ದರ್ಪ ತೊರಿಸಿರುವ ಪ್ರಕರಣ ಕುರಿತು ನನ್ನ ಗಮನಕ್ಕೆ ಬಂದಿಲ್ಲ. ಈ ಕುರಿತು ವರದಿ ತರಿಸಿಕೊಂಡು ವಿಚಾರಣೆ ನಡೆಸುತ್ತೇನೆ ಎಂದು ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಆಲದ ಮರಕ್ಕೆ ರಾಖಿ ಕಟ್ಟಿದ ಲಾಲು