Select Your Language

Notifications

webdunia
webdunia
webdunia
webdunia

ಗಣಿತ ನೋಟ್ಸ್ ತರದಿದ್ದಕ್ಕೆ ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಹಲ್ಲೆ

ಗಣಿತ ನೋಟ್ಸ್ ತರದಿದ್ದಕ್ಕೆ ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಹಲ್ಲೆ
bangalore , ಸೋಮವಾರ, 4 ಜುಲೈ 2022 (20:08 IST)
ಸ್ಕೂಲ್ಗೆ ಗಣಿತ ನೋಟ್ಸ್ ತೆಗೆದುಕೊಂಡು ಹೋಗಿಲ್ಲ ಅಂತ ವಿದ್ಯಾರ್ಥಿ ಮೇಲೆ ಶಿಕ್ಷಕ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಿಕ್ಷಕನಿಂದ ಹೊಡೆತಕ್ಕೆ ಒಳಗಾದ ವಿದ್ಯಾರ್ಥಿ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬೆಂಗಳೂರಿನ ಮೂಡಲಪಾಳ್ಯದ ಖಾಸಗಿ ಶಾಲೆಯಲ್ಲಿ ತನ್ಮಯ್ 6ನೇ ತರಗತಿಯಲ್ಲಿ ಓದುತ್ತಿದ್ದಾನೆ. ಕಳೆದ ಶುಕ್ರವಾರ ಈತ ಶಾಲೆಗೆ ಗಣಿತ ನೋಟ್ಸ್ ತೆಗೆದುಕೊಂಡು ಹೋಗಿರಲಿಲ್ಲ. ಇದಕ್ಕೆ ಸಿಟ್ಟಾದ ಗಣಿತ ಶಿಕ್ಷಕ ಮಾದೇಶ್ ತನ್ಮಯ್ಗೆ ಥಳಿಸಿದ್ದಾರೆ. ಶಿಕ್ಷಕನ ಹೊಡೆತಕ್ಕೆ ಕೆನ್ನೆ, ಕಣ್ಣಿಗೆ ಬಲವಾದ ಪೆಟ್ಟು ಬಿದ್ದಿದೆ. ಸದ್ಯ ತನ್ಮಯ್ ವಾಣಿ ವಿಲಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Share this Story:

Follow Webdunia kannada

ಮುಂದಿನ ಸುದ್ದಿ

ಟೊಮೆಟೋ ಬೆಲೆ ಇಳಿಕೆ