Webdunia - Bharat's app for daily news and videos

Install App

ಸಚಿವ ಆಂಜನೇಯಗೆ ಸವಾಲು ಹಾಕಿದ ವಿದ್ಯಾರ್ಥಿನಿ

Webdunia
ಶುಕ್ರವಾರ, 22 ಸೆಪ್ಟಂಬರ್ 2017 (16:43 IST)
ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಸಚಿವ ಆಂಜನೇಯಗೆ ವಿದ್ಯಾರ್ಥಿನಿಯೊಬ್ಬಳು ಸವಾಲು ಹಾಕಿದ ಘಟನೆ ನಡೆದಿದೆ. ಸರ್ಕಾರಿ ಶಾಲೆಗಳನ್ನ ನಿರ್ಲಕ್ಷಿಸಲಾಗುತ್ತಿದೆ ಎಂದು ಭಾಷಣ ಬಿಗಿದಿದ್ದ ಸಚಿವರಿಗೆ ಮುಖಾಮುಖಿಯಾದ ವಿದ್ಯಾರ್ಥಿನಿ ಒಳ್ಳೆಯ ಮೂಲಭೂತ ಸೌಕರ್ಯ ಕೊಡಿ, ನಿಮ್ಮ ಮಕ್ಕಳನ್ನೂ ಸರ್ಕಾರಿ ಶಾಲೆಗೆ ಸೇರಿಸಿ ಎಂದು ಸವಾಲು ಹಾಕಿದ್ದಾರೆ.

ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಸಚಿವರು, ಸರ್ಕಾರಿ ಶಾಲೆಯಲ್ಲಿ ಓದಿದ ವಿಶ್ವೇಶ್ವರಯ್ಯ ವಿಶ್ವವಿಖ್ಯಾತ ಇಂಜಿನಿಯರ್ ಆದರು. ಸರ್ಕಾರಿ ಶಾಲೆಯಲ್ಲಿ ಓದಿದವರು ಸಂವಿಧಾನ ರಚಿಸಿದರು. ಸಿಎಂ ಸಿದ್ದರಾಮಯ್ಯ ಸಹ ಸರ್ಕಾರಿ ಶಾಲೆಯಲ್ಲಿ ಓದಿದವರೇ. 1,2,3,4 ಓದಿಲ್ಲ ನೇರ 5ನೇ ತರಗತಿಗೆ ಸೇರಿ ಬಿಎಸ್`ಸಿ ಓದಿ ಲಾಯರ್ ಆಗಿದ್ದರು ಎಂದು ವಿದ್ಯಾರ್ಥಿಗಳಿಗೆ ಪಾಠ ಮಾಡಿದರು. ಆದರೆ, ಸರ್ಕಾರಿ ಶಾಲೆಗಳನ್ನ ನಿರ್ಲಕ್ಷ್ಯ ಮಾಡಲಾಗುತ್ತಿದೆ. ಮಕ್ಕಳನ್ನ ಸೇರಿಸಲು ಮುಂದೆ ಬರುತ್ತಿಲ್ಲ ಎಂದು ಹೇಳಿದರು.

ಭಾಷಣ ಮುಗಿಸಿ ಬಂದ ಸಚಿವರಿಗೆ ಮುಗಿಸಿ ಬಂದ ಸಚಿವರಿಗೆ ಮುಖಾಮುಖಿಯಾದ ವಿದ್ಯಾರ್ಥಿನಿ ನಯನಾ, ಸರಕಾರಿ ಶಾಲೆಗೆ ರಾಜಕಾರಣಿಗಳು, ಸರ್ಕಾರಿ ಕೆಲಸಗಾರರನ್ನ ಸೇರಿಸಬೇಕೆಂಬ ನಿಯಮ ಜಾರಿ ಮಾಡಿ, ಅವಾಗ ಶಾಲೆಗಳು ಉದ್ಧಾರ ಆಗುತ್ತೇವೆ ಎಂದರು. ನೀನು ಯಾವ ಶಾಲೆಯಲ್ಲಿ ಓದುತ್ತಿದ್ದೀಯಾ ಎಂದು ಸಚಿವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ನಯನಾ, ನಾನು ಖಾಸಗಿ ಶಾಲೆಯಲ್ಲಿ ಓದುತ್ತಿದ್ದೇನೆ. ಸರ್ಕಾರಿ ಶಾಲೆಯಲ್ಲಿ ಮೂಲಭೂತ ಸೌಕರ್ಯ ಕೊಡಿ ನಾನು ನನ್ನ ಜೊತೆಗಿರುವ 30 ವಿದ್ಯಾರ್ಥಿಗಳು ಮುಂದಿನ ವರ್ಷದಿಂದ ಸರ್ಕಾರಿ ಶಾಲೆಗೆ ಸೇರುತ್ತೇವೆಂದು ಸವಾಲು ಹಾಕಿದರು. ವಿದ್ಯಾರ್ಥಿನಿ ಮಾತನ್ನ ಆಲಿಸಿದ ಸಚಿವರು ಶಿಕ್ಷಣ ಸಚಿವರ ಗಮನಕ್ಕೆ ತರುತ್ತೇನೆಂದು ಹೇಳಿ ಹೊರಟರು.     

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments