Webdunia - Bharat's app for daily news and videos

Install App

ವಾಟ್ಸಪ್‍ನಲ್ಲಿ ಫೋಟೋ ಕಳಿಸುವಂತೆ ವಿದ್ಯಾರ್ಥಿನಿಗೆ ಕಿರುಕುಳ: ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ವಿರುದ್ಧ ಆಕ್ರೋಶ

Webdunia
ಶುಕ್ರವಾರ, 29 ಜೂನ್ 2018 (17:02 IST)
ವ್ಯಾಟ್ಯಪ್ ಗೆ ತನ್ನ ಫೋಟೋ ಕಳಿಸುವಂತೆ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದ ಕಾಲೇಜಿನ ಕಾರ್ಯದರ್ಶಿಯನ್ನು ಬಂಧಿಸುವಂತೆ ಒತ್ತಾಯಿಸಿದ್ದಲ್ಲದೆ ಶಾಲೆಯ ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ಬೇಲೂರು ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ವಿಶ್ವ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಕಾರ್ಯದರ್ಶಿ ಯಶಸ್ವಿ, ಅದೇ ಕಾಲೇಜಿನಲ್ಲಿ ಹತ್ತನೆ ತರಗತಿ ಓದುತ್ತಿರುವ ವಿದ್ಯಾರ್ಥಿನಿಗೆ ಪ್ರತಿ ನಿತ್ಯ ಪೋಟೋ ಕಳಿಸುವಂತೆ ಕಿರುಕುಳ ನೀಡುತ್ತಿದ್ದನು. ಇದರಿಂದ ಬೇಸತ್ತ ವಿದ್ಯಾರ್ಥಿನಿ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಕಾಲೇಜಿಗೆ ಆಗಮಿಸಿದ ಪೋಷಕರು ಕಾಲೇಜಿನ ಆಡಳಿತ ಮಂಡಳಿಗೆ ದೂರು ನೀಡಿದ್ದರು.

ಈ ವೇಳೆ ಕಾರ್ಯದರ್ಶಿ ಯಶಸ್ವಿ ಎಲ್ಲರ ಎದುರು ತನ್ನ ತಪ್ಪನ್ನು ಒಪ್ಪಿಕೊಂಡು ವಿದ್ಯಾರ್ಥಿನಿ ಬಳಿ ಕ್ಷಮೆಯಾಚಿಸಿದ್ದನು. ಮರು ದಿನ ವಿದ್ಯಾರ್ಥಿನಿ ಶಾಲೆಗೆ ಬರುತ್ತಿದ್ದ ವೇಳೆ ರಸ್ತೆ ಮಧ್ಯೆ ಅಡ್ಡಗಟ್ಟಿ ನಿನ್ನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಧಮಕಿ ಹಾಕಿದ್ದು, ಹೆದರಿದ ಬಾಲಕಿ ಮತ್ತೆ ತನ್ನ ಪೋಷಕರಿಗೆ ತಿಳಿಸಿದ್ದಾರೆ. 
 
ಕಾಲೇಜಿಗೆ ಆಗಮಿಸಿದ ಪೋಷಕರು ಕಾಲೇಜಿನ ಪ್ರಾಂಶುಪಾಲ ಹಾಗೂ ಆಡಳಿತಮಂಡಳಿಯವರನ್ನು ತರಾಟೆಗೆ ತೆಗೆದುಕೊಂಡರು. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ‌ಪರಿಸ್ಥಿತಿ ತಿಳಿಗೊಳಿಸಿದರು. ಕೂಡಲೇ ಯಶಸ್ವಿಯನ್ನು ಬಂಧಿಸಿ ಶಿಸ್ತು ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.

ಯಶಸ್ವಿ ಕಾಲೇಜಿನ ಮಾಲೀಕ ಹಾಗೂ ವೈಡಿಡಿ ಕಾಲೇಜಿನ ಪ್ರಾಂಶುಪಾಲ ಜಯಣ್ಣಗೌಡ ಅವರ ಪುತ್ರನಾಗಿದ್ದಾನೆ. ಜಯಣ್ಣಗೌಡ ಈ ಹಿಂದೆ ಉಪನ್ಯಾಸಕರೊಬ್ಬರ ಪುತ್ರಿಯ ಫೋಟೋ ಮೇಲೆ ಅಶ್ಲೀಲವಾಗಿ ಬರೆದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಪೊಲೀಸರ ಅತಿಥಿಯಾಗಿದ್ದನು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments