Select Your Language

Notifications

webdunia
webdunia
webdunia
Tuesday, 8 April 2025
webdunia

ಸೈಕಲ್‍ಗಾಗಿ ವಿದ್ಯಾರ್ಥಿ ಕಿಡ್ನಾಪ್! ಮುಂದೇನಾಯ್ತು?

ಸೈಕಲ್
ಕಲಬುರಗಿ , ಭಾನುವಾರ, 13 ಮಾರ್ಚ್ 2022 (14:41 IST)
ಕಲಬುರಗಿ : ಸೈಕಲ್ ವಿಚಾರದಲ್ಲಿ ಗಲಾಟೆ ನಡೆದು ಪಿಯುಸಿ ವಿದ್ಯಾರ್ಥಿಯನ್ನು ಅಪಹರಣ ಮಾಡಿಲಾಗಿದೆ ಎಂಬ ಆರೋಪ ವಿವಿ ಠಾಣಾ ವ್ಯಾಪ್ತಿಯಲ್ಲಿ ಕೇಳಿಬಂದಿದೆ.

ಮೂರು ದಿನಗಳ ಹಿಂದೆ ಟ್ಯೂಷನ್ಗೆ ಹೋಗಿ ಬರುವುದಾಗಿ ಹೇಳಿ ಹೋದವ ಇಲ್ಲಿವರೆಗೆ ಮನೆಗೆ ಬಾರದ ಕಾರಣ ಪೋಷಕರು ಆತಂಕದಲ್ಲಿದ್ದಾರೆ.

ನಗರದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಪಿಯುಸಿ ಸೈನ್ಸ್ ಓದುತ್ತಿರುವ ಸಂತೋಷ್ ಚೌವ್ಹಾಣ್(17) ಕಿಡ್ನಾಪ್ ಆಗಿರುವ ವಿದ್ಯಾರ್ಥಿ.

ಕಲಬುರಗಿಯ ಶಹಬಾದ ರಸ್ತೆ ಮಾತಾ ಮಾಣಿಕೇಶ್ವರಿ ಕಾಲೋನಿ ನಿವಾಸಿಯಾದ ಸಂತೋಷ್, ಪ್ರತಿನಿತ್ಯ ಕಾಲೇಜು ಹಾಗೂ ಮನೆಗೆ ಓಡಾಡಲು ತನ್ನ ಸ್ನೇಹಿತನ ಬಳಿ ಮೂರು ಸಾವಿರಕ್ಕೆ ಸೈಕಲೊಂದನ್ನು ಖರೀದಿ ಮಾಡಿರುತ್ತಾನೆ.

ನಂತರ ಅದೇ ಸೈಕಲ್ ಕಾಲೇಜಿಗೆ ತೆಗೆದುಕೊಂಡು ಹೋದಾಗ ಅದು ಕಳ್ಳತನ ಮಾಡಿರುವ ಸೈಕಲ್ ಎಂದು ತಿಳಿದುಬಂದಿದೆ. ನಿನ್ನೆ ಸ್ನೇಹಿತ ಸೈಕಲ್ನನ್ನು ಕದ್ದು ಮಾರಾಟ ಮಾಡಿದ್ದಾನೆ ಎಂದು ಸೈಕಲ್ನ ಮೂಲ ವಾರಸುದಾರ ಕಾಲೇಜ್ಗೆ ಬಂದಿದ್ದಾನೆ. ಈ ವೇಳೆ ಸಂತೋಷ್ ಜೊತೆ ಗಲಾಟೆ ಮಾಡಿ ಸೈಕಲ್ ತೆಗೆದುಕೊಂಡು ಹೋಗಿದ್ದಾನೆ. 

ನಂತರ ಅಂದು ಸಂಜೆ ಮನೆಯಿಂದ ರಾಜಾಪುರ ಬಡಾವಣೆಯಲ್ಲಿರುವ ಟ್ಯೂಷನ್ಗೆ ಹೋಗಿ ಬರುವುದಾಗಿ ಮನೆಯಿಂದ ಸಂತೋಷ ಹೋಗಿದ್ದು, ಮೂರು ದಿನವಾದರೂ ಮನೆಗೆ ಮರಳಿಲ್ಲ.
ಮಾರ್ಗ ಮಧ್ಯೆ ದುಷ್ಕರ್ಮಿಗಳು ಸಂತೋಷ್ನನ್ನು ಕಿಡ್ನಾಪ್ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಈ ಘಟನೆ ಮಾರ್ಚ್ 11 ರಂದು ನಡೆದಿದೆ.


Share this Story:

Follow Webdunia kannada

ಮುಂದಿನ ಸುದ್ದಿ

BJP ಬಂದ್ರೆ ಮಹಿಳೆಯರಿಗೆ ಉಚಿತ ಬಸ್ ಪಾಸ್ : ಶ್ರೀರಾಮುಲು