ಮೈಸೂರಿನಲ್ಲಿ ವಾಮಾಚಾರಕ್ಕೆ ವಿದ್ಯಾರ್ಥಿ ಬಲಿ

Webdunia
ಮಂಗಳವಾರ, 4 ಜನವರಿ 2022 (17:49 IST)
ಮೈಸೂರು:-ಸ್ನೇಹಿತರೇ ತಮ್ಮ ಗೆಳೆಯನೊಬ್ಬನನ್ನು ಧನುರ್ ಅಮಾವಾಸ್ಯೆ ದಿನದಂದು ವಾಮಾಚಾರಕ್ಕೆಂದು ಬಲಿಕೊಟ್ಟಿರುವ ಬೆಚ್ಚಿ ಬೀಳಿಸುವ ಆಘಾತಕಾರಿ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ.
ಮೈಸೂರಿನ ನಂಜನಗೂಡು ತಾಲೂಕ ಹೆಮ್ಮರಗಾಲ ಗ್ರಾಮದ ಸಿದ್ದರಾಜು ಎಂಬುವರ ಪುತ್ರ ಮಹೇಶ್ ಅಲಿಯಾಸ್ ಮನು (16) ಎಂಬಾತನೆ ವಾಮಾಚಾರಕ್ಕೆ ಬಲಿಯಾದ ಬಾಲಕ.
ಧನುರ್ ಮಾಸದ ಅಮಾವಾಸ್ಯ ದಿನದಂದು ಕೆರೆ ಬಳಿ ವಾಮಾಚಾರ ಮಾಡಿದ ಸ್ನೇಹಿತರೇ ಅಮಾಯಕ ಬಾಲಕನನ್ನ ಬಲಿ ಪಡೆದಿದ್ದಾರೆ. ನಂಜನಗೂಡು ತಾಲೂಕು ಹಳೆಪುರ ಗ್ರಾಮದ ಕೆರೆಯಲ್ಲಿ ಬಾಲಕನ ಮೃತದೇಹ ದೊರೆತಿದೆ.
ವಾಮಾಚಾರ ಹೆಸರಲ್ಲಿ ಹತ್ಯೆಗೈದ ಮೂವರು ಸ್ನೇಹಿತರನ್ನು ಕೌಲಂದೆ ಪೊಲೀಸರು ಬಂಧಿಸಿದ್ದಾರೆ.
ಈ ಪೈಕಿ ಒಬ್ಬ ಆರೋಪಿ ಚಿಕ್ಕ ವಯಸ್ಸಿನಲ್ಲೇ ತನ್ನ ತಾತನಿಂದ ವಾಮಾಚಾರ ಮಾಡುವುದನ್ನ ಕಲಿತಿದ್ದನಂತೆ. ಧನುರ್ ಮಾಸದ ಅಮಾವಾಸ್ಯೆ ದಿನ ಬಲಿ ಕೊಟ್ಟರೆ ಇಷ್ಟಾರ್ಥ ಸಿದ್ದಿಗಳು ನೆರವೇರುತ್ತವೆ ಎಂಬ ನಂಬಿಕೆ ಇವರಲ್ಲಿ ಗಾಢವಾಗಿತ್ತು.
ಇದೇ ದೃಷ್ಟಿಯಿಂದ ಭಾನುವಾರ ಮಹೇಶ್‌ನನ್ನು ಪುಸಲಾಯಿಸಿದ ಈ ಮೂವರು ಕಿರಾತಕರು, ಕೆರೆ ಬಳಿಗೆ ಕರೆತಂದಿದ್ದಾರೆ. ಸ್ನೇಹಿತರ ಉದ್ದೇಶ ಅರಿಯದ ಅಮಾಯಕ ಮಹೇಶ್ ಜೊತೆಗೆ ಬಂದಿದ್ದಾನೆ. ಸ್ಥಳದಲ್ಲಿ ಗೊಂಬೆಯೊಂದನ್ನ ತಯಾರಿಸಿ, ಅದರ ಮೇಲೆ ಮಹೇಶ್ ಹೆಸರು ಬರೆದು, ನಂತರ ಪೂಜೆ ಮಾಡಿದ್ದಾರೆ.
ಪೂಜೆ ನಂತರ ಮಹೇಶ್‌ನನ್ನು ಆರೋಪಿಗಳು ಕೆರೆಗೆ ತಳ್ಳಿದ್ದಾರೆ. ಕೃತ್ಯವೆಸಗಿದ ನಂತರ ಆರೋಪಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಮಹೇಶ್ ಕೆರೆಗೆ ಬಿದ್ದಿದ್ದಾನೆ ಎಂದು ಸ್ನೇಹಿತನೊಬ್ಬ ಗ್ರಾಮದ ಹಿರಿಯರಿಗೆ ಮಾಹಿತಿ ತಿಳಿಸಿದ್ದಾನೆ.
ಗ್ರಾಮದ ಜನ ಕೆರೆಯಲ್ಲಿ ಶೋಧನೆ ಮಾಡಿದಾಗ ಮಹೇಶ್ ಮೃತದೇಹ ದೊರೆತಿದೆ.ಅಲ್ಲದೆ ಕೆರೆ ಬಳಿ ವಾಮಾಚಾರ ಪೂಜೆ ಮಾಡಿದ ಕುರುಹುಗಳು ಪತ್ತೆಯಾಗಿದೆ. ಗೊಂಬೆ,ಕೋಳಿ,ಮಡಿಕೆ ಸೇರಿದಂತೆ ಇನ್ನಿತರ ಪದಾರ್ಥಗಳು ದೊರೆತಿದೆ.
ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ
ಕೌಲಂದೆ ಪೊಲೀಸರು ಪರಿಶೀಲನೆ ನಡೆಸಿದರು. ಬಳಿಕ ಮೂವರು ಅಪ್ರಾಪ್ತ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments