Webdunia - Bharat's app for daily news and videos

Install App

ವಿದ್ಯಾರ್ಥಿನಿ ಶೂಟೌಟ್ ಪ್ರಕರಣ: ಕಾಲೇಜು ಪ್ರಾಂಶುಪಾಲರ ಬಂಧನ

Webdunia
ಗುರುವಾರ, 2 ಏಪ್ರಿಲ್ 2015 (11:18 IST)
ವಿದ್ಯಾರ್ಥಿನಿ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಪ್ರಗತಿ ಕಾಲೇಜಿನ ಪ್ರಾಂಶುಪಾಲ ಎಸ್.ಪ್ರಶಾಂತ್ ಅವರನ್ನು ಇಂದು ಬಂಧಿಸಿದ್ದಾರೆ. 
 
ಕಾಲೇಜಿಗೆ ಭದ್ರತೆ ಒದಗಿಸುವಲ್ಲಿ ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಪ್ರಂಶುಪಾಲ ಎಸ್. ಪ್ರಶಾಂತ್ ಅವರನ್ನು ಬಂಧಿಸಲಾಗಿದ್ದು, ಇವರು ಕಾಲೇಜಿನ ನಿರ್ದೇಶಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ ಎನ್ನಲಾಗಿದೆ. 
 
ಭಾರತೀಯ ದಂಡ ಸಂಹಿತೆ 188ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿರುವ ನಗರದ ಕಾಡುಗೋಡಿ ಪೊಲೀಸರು, ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.  
 
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿನ ಅಧ್ಯಕ್ಷ ಕೆ.ಎಂ.ಸೋಮ್ ಸಿಂಗ್ ಅವರನ್ನು ಪೊಲೀಸರು ನಿನ್ನೆಯಷ್ಟೇ ಬಂಧಿಸಿದ್ದರು. 
 
ನಗರದ ಪ್ರಗತಿ ಕಾಲೇಜಿನ ಅಟೆಂಡರ್ ಮಹೇಶ್.ಕೆ ಎಂಬಾತ ಇಲ್ಲಿನ ವಸತಿ ಶಾಲೆಯಲ್ಲಿಯೇ ತಂಗಿದ್ದ ಪಾವಗಡ ಮೂಲದ ಪಿಯುಸಿ ವಿದ್ಯಾರ್ಥಿನಿ ಗೌತಮಿ(18) ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದ. ಅಲ್ಲದೆ ಮೃತ ವಿದ್ಯಾರ್ಥಿನಿಯ ಸ್ನೇಹಿತೆ ಶಿರಿಶಾ(18) ಮೇಲೂ ಗುಂಡು ಹಾರಿಸಿ ಗಾಯಗೊಳಿಸಿದ್ದ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ. ಘಟನೆಯು ಮಾರ್ಚ್ 31ರ ರಾತ್ರಿ ನಡೆದಿತ್ತು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments