Webdunia - Bharat's app for daily news and videos

Install App

ವಿದ್ಯಾರ್ಥಿನಿ ಶೂಟೌಟ್ ಪ್ರಕರಣ: ರುದ್ರಭೂಮಿಯಲ್ಲಿ ಗೌತಮಿ ಅಂತ್ಯಕ್ರಿಯೆ

Webdunia
ಗುರುವಾರ, 2 ಏಪ್ರಿಲ್ 2015 (12:34 IST)
ಕಾಲೇಜಿನ ಅಟೆಂಡರ್ ಗುಂಡಿಗೆ ಬಲಿಯಾದ ವಿದ್ಯಾರ್ಥಿನಿ ಗೌತಮಿಯ ಅಂತ್ಯಕ್ರಿಯೆಗೆ ಆಕಯ ಹುಟ್ಟೂರಿನಲ್ಲಿ ಎಲ್ಲಾ ಸಿದ್ಧತೆಯನ್ನೂ ಮಾಡಿಕೊಂಡಿದ್ದು, ಇನ್ನು ಕೇಲವೇ ಕ್ಷಣಗಳಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. 
 
ವಿದ್ಯಾರ್ಥಿನಿಯ ಅಂತ್ಯಕ್ರಿಯೆಯು ಹಟ್ಟೂರಾದ ಜಿಲ್ಲೆಯ ಪಾವಗಡ ನಗರದಲ್ಲಿ ನೆರವೇರಿಸಲಾಗುತ್ತಿದ್ದು, ಆರ್ಯ ಸಮಾಜದ ವಿಧಿ ವಿಧಾನಗಳೊಂದಿಗೆ ಅಗ್ನಿ ಸ್ಪರ್ಶ ಮಾಡಿ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. 
 
ಇನ್ನು ಅಂತ್ಯ ಕ್ರಿಯೆಗೂ ಮುನ್ನ ನಗರ ಪದ್ಮನಾಭ ನಗರದ್ಲಲಿನ ಮನೆಯ ಎದುರು ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಿಡಲಾಗಿತ್ತು. ಈ ವೇಳೆ ಕ್ಷೇತ್ರದ ಶಾಸಕ ತಿಮ್ಮರಾಯಪ್ಪ, ಜಿ. ಸದಸ್ಯರು ಸೇರಿದಂತೆ ಇತರೆ ಸಿಬ್ಬಂದಿಗಳು ಆಗಮಿಸಿ ಅಂತಿಮ ದರ್ಶನ ಪಡೆದರು. 
 
ಬೆಂಗಳೂರಿನ ಕಾಡುಗೋಡಿಯಲ್ಲಿರುವ ಪ್ರಗತಿ ಕಾಲೇಜಿನ ಅಟೆಂಡರ್ ಮಹೇಶ್.ಕೆ ಎಂಬಾತ ಇದೇ ಕಾಲೇಜಿನ ವಸತಿ ಶಾಲೆಯಲ್ಲಿಯೇ ತಂಗಿದ್ದ ಪಾವಗಡ ಮೂಲದ ಪಿಯುಸಿ ವಿದ್ಯಾರ್ಥಿನಿ ಗೌತಮಿ(18) ಮೇಲೆ ಮಾರ್ಚ್ 31ರ ರಾತ್ರಿ ಗುಂಡಿನ ದಾಳಿ ನಡೆಸಿದ್ದ. ಈ ವೇಳೆ ಗೌತಮಿ ಮೃತಪಟ್ಟಿದ್ದಳು. ಆರೋಪಿ ಮಹೇಶ್‌ನನ್ನು ಬಂಧಿಸಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments