Webdunia - Bharat's app for daily news and videos

Install App

ಶೂಟೌಟ್ ಪ್ರಕರಣ: ನಾಳೆ ಅಂತ್ಯ ಸಂಸ್ಕಾರ

Webdunia
ಬುಧವಾರ, 1 ಏಪ್ರಿಲ್ 2015 (17:24 IST)
ಕಾಲೇಜಿನ ಅಟೆಂಡರ್ ಹಾರಿಸಿದ್ದ ಗುಂಡಿಗೆ ಗುರಿಯಾಗಿ ಸಾವನ್ನಪ್ಪಿದ್ದ ವಿದ್ಯಾರ್ಥಿನಿಯ ಅಂತ್ಯ ಸಂಸ್ಕಾರ ನಾಳೆ ಹುಟ್ಟೂರು ತುಮಕೂರಿನ ಪಾವಗಡದಲ್ಲಿ ನಡೆಸಲಾಗುವುದು ಎಂದು ವಿದ್ಯಾರ್ಥಿನಿಯ ತಂದೆ ಟಿ.ರಮೇಶ್ ತಿಳಿಸಿದ್ದಾರೆ. 
 
ಶೂಟೌಟ್ ನಲ್ಲಿ ಸಾವನ್ನಪ್ಪಿದ್ದ ರಮೇಶ್ ಅವರ ಮಗಳು ಗೌತಮಿ ಅವರ ಮೃತ ದೇಹವನ್ನು ನಗರದ ವೈದೇಹಿ ಆಸ್ಪತ್ರೆಯ ವೈದ್ಯರು ಮರಣೋತ್ತರ ಪರೀಕ್ಷೆಯನ್ನು ನಡೆಸಿದ್ದರು. ಬಳಿಕ ದೇಹವನ್ನು ಕಾಲೇಜಿನ ಮುಂದೆ ಇರಿಸಿ ಪ್ರತಿಭಟನೆ ನಡೆಸಲು ವಿದ್ಯಾರ್ಥಿನಿ ಪೋಷಕರು ನಿರ್ಧರಿಸಿದ್ದರು. ಆದರೆ ಪೊಲೀಸರು ಕಾಲೇಜಿಗೆ ಮೃತ ದೇಹವನ್ನು ತೆಗೆದುಕೊಂಡು ಹೋಗಲು ಅವಕಾಶ ನೀಡಲಿಲ್ಲ. ಈ ಹಿನ್ನೆಲೆಯಲ್ಲಿ ಮೃತ ದೇಹವನ್ನು ಹುಟ್ಟೂರು ಪಾವಗಡಕ್ಕೆ ಸಾಗಿಸಲಾಗುತ್ತಿದೆ. 
 
ಇನ್ನು ಅಂತ್ಯ ಸಂಸ್ಕಾರದ ಬಗ್ಗೆ ಪ್ರತಿಕ್ರಿಯಿಸಿರುವ ವಿದ್ಯಾರ್ಥಿನಿ ತಂದೆ ಟಿ.ರಮೇಶ್, ಹಿಂದೂ ವಿಧಾನಗಳ ಪ್ರಕಾರ ನಾಳೆ ಹನ್ನೊಂದು ಗಂಟೆಗೆ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ತಿಳಿಸಿದ್ದಾರೆ. 
 
ಈ ಪ್ರಕರಣವು ಬೆಂಗಳೂರಿನ ಕಾಡುಗೋಡಿಯಲ್ಲಿರುವ ಪ್ರಗತಿ ಕಾಲೇಜಿನಲ್ಲಿ ನಿನ್ನೆ ರಾತ್ರಿ ನಡೆದಿದ್ದು, ವಿದ್ಯಾರ್ಥಿನಿ ಗೌತಮಿಯ ಮೇಲೆ ಕಾಲೇಜಿನಲ್ಲಿ ಅಟೆಂಡರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಆರೋಪಿ ಮಹೇಶ್ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದ. 
 
ಪ್ರಕರಣದ ಬಳಿಕ ತನ್ನ ಅಕ್ಕನ ಮನೆಯಲ್ಲಿ ತಂಗಿದ್ದ ಆರೋಪಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ. ನಗರದ ಬಿ.ನಾರಾಯಣಪುರದಲ್ಲಿ ಆರೋಪಿಯನ್ನು ಬಂಧಿಸಲಾಗಿತ್ತು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments