ವಿದ್ಯಾರ್ಥಿನಿ ಆತ್ಮಹತ್ಯೆ

Webdunia
ಶನಿವಾರ, 5 ಮಾರ್ಚ್ 2022 (16:50 IST)
ಮಹಿಳಾ ಪಿಜಿ ಕಟ್ಟಡ ದಿಂದ ಜಿಗಿದು ಬಿಕಾಂ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿ ರುವ ಘಟನೆ ಜೆಬಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೂಲತಃ ಮುಳಬಾಗಿಲಿನ ಭವ್ಯ(19) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಈಕೆ ಜ್ಯೋತಿನಿವಾಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದರು.
 
ಮುರುಗೇಶ್‍ಪಾಳ್ಯದಲ್ಲಿ ಭವ್ಯ ಪೋಷಕರೊಂದಿಗೆ ನೆಲೆಸಿದ್ದರು. ನಿನ್ನೆ ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ಭವ್ಯ ಹೊರಟ್ಟಿದ್ದಾರೆ. ಆದರೆ ಕಾಲೇಜಿಗೆ ಹೋಗದೆ ಅಮರಜ್ಯೋತಿ ಲೇಔಟ್‍ನಲ್ಲಿರುವ ಮಹಿಳಾ ಪಿಜಿಗೆ ಹೋಗಿ ಅಲ್ಲಿನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
 
ಸುದ್ದಿ ತಿಳಿದು ಜೆಬಿನಗರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೂ ಮುನ್ನ ಭವ್ಯ ತನ್ನ ಸಹೋದರಿಯ ಮೊಬೈಲ್‍ಗೆ ಕರೆ ಮಾಡಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಈ ವಿಷಯವನ್ನು ಸಹೋದರಿ ಪೋಷಕರಿಗೆ ತಿಳಿಸಿದಾಗ ಭವ್ಯ ತಂದೆ ತಕ್ಷಣ ಕರೆ ಮಾಡಿದರಾದರೂ ಅಷ್ಟೊತ್ತಿಗಾಗಲೇ ಭವ್ಯ ಆತ್ಮಹತ್ಯೆ ಮಾಡಿಕೊಂಡಿದ್ದರು.
 
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪರೀಕ್ಷೆ ಸರಿಯಾಗಿ ಬರೆದಿಲ್ಲವೆಂದು ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments