Webdunia - Bharat's app for daily news and videos

Install App

ವಿದ್ಯಾರ್ಥಿನಿ ಆತ್ಮಹತ್ಯೆ ಕಡೆ ಆಸೆ ಕೇಳಿ ಬೆಚ್ಚಿಬಿದ್ದ ಗ್ರಾಮಸ್ಥರು

Webdunia
ಭಾನುವಾರ, 2 ಅಕ್ಟೋಬರ್ 2022 (14:03 IST)
ಯುವತಿಯೊಬ್ಬಳು ಗಣೇಶ ವಿಸರ್ಜನೆಗಾಗಿ ನಿರ್ಮಿಸಿದ್ದ ಕೆರೆಯೊಂದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೂ ಮೊದಲು 4 ಪುಟಗಳ ಸುದೀರ್ಘ ಡೆತ್​ನೋಟ್​ ಕೂಡ ಬರೆದಿಟ್ಟಿದ್ದಳು. ಇದೀಗ ಆ ಡೆತ್​​ನೋಟ್ ಮಾಹಿತಿ ಬಹಿರಂಗಗೊಂಡಿದ್ದು, ಯುವತಿ ಅದರಲ್ಲಿ ತನ್ನ ಕೊನೆಯ ಆಸೆಯನ್ನೂ ಹೇಳಿಕೊಂಡಿದ್ದಾಳೆ.
ಸಿಂಧನೂರಿನಲ್ಲಿ ಈ ಘಟನೆ ನಡೆದಿದೆ. ಹತ್ತನೇ ತರಗತಿ ವಿದ್ಯಾರ್ಥಿನಿ ಸಾರಿಕಾ (16) ಆತ್ಮಹತ್ಯೆ ಮಾಡಿಕೊಂಡವಳು. ನಾಲ್ಕು ಪುಟಗಳ ಡೆತ್​ನೋಟ್ ಸಿಕ್ಕಿದ್ದರೂ ಆತ್ಮಹತ್ಯೆಗೆ ಕಾರಣ ಏನು ಎಂಬ ಬಗ್ಗೆ ನಿಖರವಾದ ಮಾಹಿತಿ ಅದರಲ್ಲಿ ಉಲ್ಲೇಖವಾಗಿಲ್ಲ. ಆದರೆ ಆಕೆ ಅದರಲ್ಲಿ ವ್ಯಕ್ತಪಡಿಸಿರುವ ಕೊನೆಯ ಆಸೆಯಂತೂ ವಿಚಿತ್ರವಾಗಿದೆ.
 
ತನ್ನ ಗೆಳೆಯ-ಗೆಳತಿಯರೊಂದಿಗೆ ಕಳೆದ ಸಂತೋಷದ ಕ್ಷಣಗಳನ್ನು ಈ ಯುವತಿ ಹೇಳಿಕೊಂಡಿದ್ದಾಳೆ. ಅಲ್ಲದೆ ತನ್ನದೊಂದು ಕೊನೆಯ ಆಸೆಯನ್ನೂ ತಿಳಿಸಿದ್ದಾಳೆ. 'ನನ್ನದು ಒಂದೇ ಆಸೆ, ನನ್ನ ಶವ ನೋಡೋಕೆ ಎಲ್ಲರೂ ಬನ್ನಿ, ಇಲ್ಲಂದ್ರೆ ನಾನು ದೆವ್ವ ಆಗಿ ಬರ್ತೀನಿ ನೋಡಿ' ಎಂಬುದಾಗಿ ತನ್ನ ಡೆತ್​ನೋಟ್​ನ ಕೊನೆಯಲ್ಲಿ ಬರೆದುಕೊಂಡಿದ್ದಳು. ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

ಮುಂದಿನ ಸುದ್ದಿ
Show comments