Webdunia - Bharat's app for daily news and videos

Install App

ವಿದ್ಯಾರ್ಥಿನಿ ಆತ್ಮಹತ್ಯೆ ಕಡೆ ಆಸೆ ಕೇಳಿ ಬೆಚ್ಚಿಬಿದ್ದ ಗ್ರಾಮಸ್ಥರು

Webdunia
ಭಾನುವಾರ, 2 ಅಕ್ಟೋಬರ್ 2022 (14:03 IST)
ಯುವತಿಯೊಬ್ಬಳು ಗಣೇಶ ವಿಸರ್ಜನೆಗಾಗಿ ನಿರ್ಮಿಸಿದ್ದ ಕೆರೆಯೊಂದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೂ ಮೊದಲು 4 ಪುಟಗಳ ಸುದೀರ್ಘ ಡೆತ್​ನೋಟ್​ ಕೂಡ ಬರೆದಿಟ್ಟಿದ್ದಳು. ಇದೀಗ ಆ ಡೆತ್​​ನೋಟ್ ಮಾಹಿತಿ ಬಹಿರಂಗಗೊಂಡಿದ್ದು, ಯುವತಿ ಅದರಲ್ಲಿ ತನ್ನ ಕೊನೆಯ ಆಸೆಯನ್ನೂ ಹೇಳಿಕೊಂಡಿದ್ದಾಳೆ.
ಸಿಂಧನೂರಿನಲ್ಲಿ ಈ ಘಟನೆ ನಡೆದಿದೆ. ಹತ್ತನೇ ತರಗತಿ ವಿದ್ಯಾರ್ಥಿನಿ ಸಾರಿಕಾ (16) ಆತ್ಮಹತ್ಯೆ ಮಾಡಿಕೊಂಡವಳು. ನಾಲ್ಕು ಪುಟಗಳ ಡೆತ್​ನೋಟ್ ಸಿಕ್ಕಿದ್ದರೂ ಆತ್ಮಹತ್ಯೆಗೆ ಕಾರಣ ಏನು ಎಂಬ ಬಗ್ಗೆ ನಿಖರವಾದ ಮಾಹಿತಿ ಅದರಲ್ಲಿ ಉಲ್ಲೇಖವಾಗಿಲ್ಲ. ಆದರೆ ಆಕೆ ಅದರಲ್ಲಿ ವ್ಯಕ್ತಪಡಿಸಿರುವ ಕೊನೆಯ ಆಸೆಯಂತೂ ವಿಚಿತ್ರವಾಗಿದೆ.
 
ತನ್ನ ಗೆಳೆಯ-ಗೆಳತಿಯರೊಂದಿಗೆ ಕಳೆದ ಸಂತೋಷದ ಕ್ಷಣಗಳನ್ನು ಈ ಯುವತಿ ಹೇಳಿಕೊಂಡಿದ್ದಾಳೆ. ಅಲ್ಲದೆ ತನ್ನದೊಂದು ಕೊನೆಯ ಆಸೆಯನ್ನೂ ತಿಳಿಸಿದ್ದಾಳೆ. 'ನನ್ನದು ಒಂದೇ ಆಸೆ, ನನ್ನ ಶವ ನೋಡೋಕೆ ಎಲ್ಲರೂ ಬನ್ನಿ, ಇಲ್ಲಂದ್ರೆ ನಾನು ದೆವ್ವ ಆಗಿ ಬರ್ತೀನಿ ನೋಡಿ' ಎಂಬುದಾಗಿ ತನ್ನ ಡೆತ್​ನೋಟ್​ನ ಕೊನೆಯಲ್ಲಿ ಬರೆದುಕೊಂಡಿದ್ದಳು. ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments